ಸುರತ್ಕಲ್ ಟೋಲ್ ಸುಂಕ ಹೆಜಮಾಡಿಯಲ್ಲಿ ವಿಲೀನಕ್ಕೆ ವಿರೋಧ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಧರಣಿ
ಪಡುಬಿದ್ರೆ, ಡಿ.2 : ಸುರತ್ಕಲ್ ಟೋಲ್ ಅನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಘೋಷಣೆಯನ್ನು ವಿರೋಧಿಸಿ ಇಂದು ಹೆಜಮಾಡಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಹೆಜಮಾಡಿ ಟೋಲ್ ಗೇಟ್ ಬಳಿ ಧರಣಿ ನಡೆಸಲಾಯಿತು.
ಈ ವೇಳೆ ಡಿ.ವೈ.ಎಫ್.ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಅವರು ಮಾತನಾಡಿ, ಟೋಲ್ ವಿಲೀನ ಆದೇಶ ರದ್ದುಗೊಳಿಸದಿದ್ದಲ್ಲಿ ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಮಾದರಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಶೇಖರ್ ಹೆಜಮಾಡಿ ಮೊದಲಾದವರು ಧರಣಿಯಲ್ಲಿ ಭಾಗವಹಿಸಿದರು.