ಯಕ್ಷಗಾನ ಕಾಲಮಿತಿ ರಾತ್ರಿ 12 ಗಂಟೆವರೆಗೆ ವಿಸ್ತರಣೆ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

ಮಂಗಳೂರು, ಡಿ.2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನದ ಕಾಲಮಿತಿಯನ್ನು ರಾತ್ರಿ 10 ಗಂಟೆಯಿಂದ 12 ಗಂಟೆವರೆಗೆ ವಿಸ್ತರಿಸಿ ವಿಶೇಷ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಯಕ್ಷಗಾನ ಕಾಲಮಿತಿಗೆ ಸಂಬಂಧಿಸಿ ರಾಜ್ಯ ಉಚ್ಚ ನ್ಯಾಯಾಲಯ ಹಾಗೂ ಸರ್ವೋಚ್ಚ ನ್ಯಾಯಾಲಯ ಆದೇಶ ಹೊರಡಿಸಿ ರಾತ್ರಿ 10 ಗಂಟೆಯ ಬಳಿಕ ಕರ್ಕಶ ಶಬ್ದಕ್ಕೆ ಅವಕಾಶ ಇಲ್ಲ ಎಂದು ಹೇಳಿದೆ. ಈ ಆದೇಶ ಪಾಲಿಸುವಂತೆ ರಾಜ್ಯ ಸರಕಾರವೂ ಸೂಚನೆ ನೀಡಿದೆ. ಆದರೆ ಇದೀಗ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ವತಿಯಿಂದ ನಡೆಯುವ ಪುರಾತನ, ಸಾಂಪ್ರದಾಯಿಕ ಕಲೆಯಾದ ಯಕ್ಷಗಾನ ಬೆಳಗ್ಗಿನವರೆಗೆ ನಡೆಸಲು ಅನುಮತಿ ಕೋರಲಾಗಿದೆ. ಈ ಬಗ್ಗೆ ಸಭೆ ನಡೆಸಿ ಯಕ್ಷಗಾನ ಕಾಲಮಿತಿಯನ್ನು ರಾತ್ರಿ 12 ಗಂಟೆಯವರೆಗೆ ವಿಸ್ತರಿಸಿ ವಿಶೇಷ ಅನುಮತಿ ನೀಡಲಾಗಿದೆ ಎಂದು ಹೇಳಿದರು

ಹಾಗೂ ಇದೇ ವೇಳೆ ಅವರು, ದೈವ ಕಲೆಗೆ ಸಂಬಂಧಿಸಿ ಅಂತಹ ಯಾವುದೇ ಅರ್ಜಿ ಬಂದಿಲ್ಲ. ಬಂದಾಗ ಆ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!