ಪುತ್ತೂರು: ಹಣಕಾಸಿನ ಗಲಾಟೆ- ಕುಡಿದ ಮತ್ತಿನಲ್ಲಿ ತಮ್ಮನನ್ನೇ ಕೊಂದ ಅಣ್ಣ
ಪುತ್ತೂರು, ಡಿ.3 : ಕುಡಿದ ಮತ್ತಿನಲ್ಲಿ ಅಣ್ಣನೊಬ್ಬ ತಮ್ಮನನ್ನು ಕೊಲೆಗೈದ ಘಟನೆ ಕೆಮ್ಮಿಂಜೆ ಗ್ರಾಮದಲ್ಲಿ ನಡೆದಿದೆ.
ಮಾದೇವಪ್ಪ ಕೊಲೆಯಾದ ವ್ಯಕ್ತಿ. ಹಾವೇರಿ ಜಿಲ್ಲೆಯ ಹೊಸೂರು ನಿವಾಸಿ ನಿಂಗನ ಗೌಡ ಕೊಲೆಗೈದ ಆರೋಪಿ.
ಕೆಮ್ಮಿಂಜೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಈ ಇಬ್ಬರು ಸಹೋದರರು ಮದ್ಯ ಸೇವನೆ ಮಾಡಿ ಹಣಕಾಸಿನ ವಿಚಾರವಾಗಿ ಜಗಳ ಮಾಡಿಕೊಂಡಿದ್ದರು. ಈ ವೇಳೆ ಸಹೋದರರ ನಡುವೆ ನಡೆದ ಗಲಾಟೆ ತಾರಕಕ್ಕೇರಿದ್ದು, ಕುಡಿದ ಮತ್ತಿನಲ್ಲಿಯೇ ತಮ್ಮ ಮಾದೇವಪ್ಪನ ಮೇಲೆ ಅಣ್ಣ ನಿಂಗನ ಗೌಡ ಹಲ್ಲೆ ಮಾಡಿದ್ದಾನೆ. ಇದರಿಂದ ಗಂಭೀರ ಗಾಯಗೊಂಡ ಮಾದೇವಪ್ಪ ಮೃತಪಟ್ಟಿದ್ದಾರೆ. ತಮ್ಮನ ಕೊಲೆ ಗೈದ ಬಳಿಕ ಅಣ್ಣ ನಿಂಗನ ಗೌಡ ಪರಾರಿಯಾಗಿದ್ದಾನೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಠಾಣೆ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.