ಬ್ರಹ್ಮಾವರ ಸಾಲ ತೀರಿಸಲಾಗದೆ ವ್ಯಕ್ತಿ ಆತ್ಮಹತ್ಯೆ

ಬ್ರಹ್ಮಾವರ ಡಿ.3 (ಉಡುಪಿ ಟೈಮ್ಸ್ ವರದಿ) : ಸಾಲ ತೀರಿಸಲಾಗದೆ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಹೊಸೂರು ಗ್ರಾಮದ ಹಾಡಿಯಲ್ಲಿ ನಡೆದಿದೆ.

ಹೊಸೂರು ಗ್ರಾಮದ ಪ್ರಕಾಶ (23) ಆತ್ಮಹತ್ಯೆ ಮಾಡಿಕೊಂಡವರು.

ಇವರು 3 ವರ್ಷದ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು ಕೊರೋನ ಬಂದ ನಂತರ ಊರಿಗೆ ಬಂದು ತೋಟದ ಕೆಲಸ ಹಾಗೂ ಗಾರೆ ಕೆಲಸ ಮಾಡಿಕೊಂಡಿದ್ದರು. ಸುಮಾರು 5 ತಿಂಗಳ ಹಿಂದೆ ಸಾಲ ಮಾಡಿ ಹೊಸ ರಿಕ್ಷಾವನ್ನು ಖರೀದಿಸಿದ್ದು, ಆ ಸಮಯ ಅವರು ಬೈಕ್ ನಲ್ಲಿ ಬಿದ್ದು ಒಂದು ತಿಂಗಳು ಮನೆಯಲ್ಲಿ ವಿಶ್ರಾಂತಿಯನ್ನು ಪಡೆದಿದ್ದರು. ಅಲ್ಲದೆ ಇದರಿಂದ ಬೇಸರಗೊಂಡು ರಿಕ್ಷಾವನ್ನು ಮಾರಿದ್ದರು. ನಂತರ ಮನೆಯಲ್ಲಿಯೇ ಇದ್ದು ಮಧ್ಯ ಸೇವನೆ ಅಭ್ಯಾಸ ಹೊಂದಿದ್ದರು.

ಈ ನಡುವೆ ಸುಮಾರು 2 ವಾರದ ಹಿಂದೆ ಪೇತ್ರಿ ಸೊಸೈಟಿಯಿಂದ 1 ಲಕ್ಷ ಸಾಲದ ಮರುಪಾವತಿಯ ಬಗ್ಗೆ ಮನೆಗೆ ನೋಟಿಸು ಬಂದಿದ್ದು, ಇದರಿಂದ ಬೇಸರಗೊಂಡು ವಿಪರೀತ ಮದ್ಯಸೇವನೆ ಮಾಡಿಕೊಂಡು ಜೀವನದಲ್ಲಿ ಜೀಗುಪ್ಸೆಗೊಂಡು ನ.30 ರ ಬೆಳಿಗ್ಗೆ ಯಿಂದ ಡಿ.2 ರ
2 ಮಧ್ಯಾಹ್ನದ ಮಧ್ಯಾವಧಿಯಲ್ಲಿ ಹೊಸೂರು ಗ್ರಾಮದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ತಾಯಿ ನೀಡಿದ ಮಾಹಿತಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!