ಕೊಲ್ಲೂರು: ಉಸಿರಾಟದ ಸಮಸ್ಯೆಯಿಂದ ವ್ಯಕ್ತಿ ಮೃತ್ಯು

ಕೊಲ್ಲೂರು ಡಿ.3 (ಉಡುಪಿ ಟೈಮ್ಸ್ ವರದಿ) : ಅನಾರೋಗ್ಯದಿಂದ ಅಸ್ವಸ್ಥಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೈಂದೂರಿನ ಜಡ್ಕಲ್ ಗ್ರಾಮದ ಬಸ್ರಿಬೇರು ಎಂಬಲ್ಲಿ ನಡೆದಿದೆ.

ಗೋವಿಂದ ನಾಯ್ಕ್ (39) ಮೃತಪಟ್ಟವರು.

ಇವರು ಅವಿವಾಹಿತರಾಗಿದ್ದು, ಡಿ.1 ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಇವರಿಗೆ ರಾತ್ರಿ 10:00 ಗಂಟೆ ಸುಮಾರಿಗೆ ವಿಪರೀತ ಕೆಮ್ಮು ಕಾಣಿಸಿಕೊಂಡಿತ್ತು. ಉಸಿರಾಡಲು ಸಮಸ್ಯೆ ಆಗಿ ಅಸ್ವಸ್ಥರಾದವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಕರೆತಂದಾಗ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯಾಧಿಕಾರಿಗಳು ಗೋವಿಂದ ನಾಯ್ಕ್ ಅವರು ಡಿ.2 ರ ಬೆಳಗ್ಗಿನ ಜಾವ ಚಿಕಿತ್ಸೆಗೆ ಕರೆ ತರುವ ದಾರಿಯಲ್ಲಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೃತರ ತಂದೆ ನೀಡಿದ ಮಾಹಿತಿಯಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!