ಮಂಗಳೂರು: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ : ಚಾಲಕರಿಬ್ಬರು ಸ್ಥಳದಲ್ಲೇ ಮೃತ್ಯು
ಮಂಗಳೂರು, ಡಿ.5 : ಲಾರಿಗಳೆರಡು ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಚಾಲಕರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುಪುರ- ಕೈಕಂಬ ಬಳಿ ಇಂದು ನಡೆದಿದೆ.
ಮೂಡಬಿದ್ರೆ ಕಡೆಯಿಂದ ಮಣ್ಣು ತುಂಬಿಸಿ ತರುತ್ತಿದ್ದ ಲಾರಿ ಗುರುಪುರ ಕಡೆಯಿಂದ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇಳಿಜಾರು ಪ್ರದೇಶದಲ್ಲಿ ಅಪಘಾತ ನಡೆದ ಕಾರಣ ಲಾರಿಗಳು ರಸ್ತೆ ಬದಿಯ ಹೊಂಡಕ್ಕೆ ಬಿದ್ದಿವೆ. ಅಪಘಾತದ ಬಳಿಕ ಜನರು ಸ್ಥಳದಲ್ಲಿ ಜಮಾಯಿಸಿದ್ದು, ಇಬ್ಬರು ಚಾಲಕರ ಮೃತದೇಹ ಹೊರತೆಗೆಯಲು ಹರಸಾಹಸ ಪಡಬೇಕಾಯಿತು.
ಅಪಘಾತದ ರಭಸಕ್ಕೆ ಎರಡೂ ಲಾರಿಗಳು ಸಂಪೂರ್ಣವಾಗಿ ಜಖಂ ಗೊಂಡಿದ್ದು, ಘಟನೆಯಿಂದ ರಸ್ತೆಯಲ್ಲಿ ಭಾರೀ ಸಂಚಾರ ದಟ್ಟಣೆ ಸಮಸ್ಯೆ ಉಂಟಾಗಿತ್ತು. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗ ಬೇಕಿದೆ.