ಪ್ರತಿಭಟನೆಯಲ್ಲಿ ಮೃತ ರೈತ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ- ವಿರೋಧ ಪಕ್ಷದ ನಾಯಕ ಹೂಡಾ ಟ್ವೀಟ್

ನವದೆಹಲಿ : ಕೇಂದ್ರದ  ಕೃಷಿ ಮಸೂದೆಯನ್ನು ಖಂಡಿಸಿ ರೈತರು ನಡೇಸುತ್ತಿರುವ ಪ್ರತಿಭಟನೆ ನಿರಂತರವಾಗಿ ನಡೆಯುತ್ತಲೇ ಇದೆ. ಈ ನಡುವೆ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ವಿರೋಧ ಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ ಹೇಳಿದ್ದಾರೆ. 

   ಈ ಕುರಿತು ಟ್ವೀಟ್ ಮಾಡಿರುವ ಅವರು, “ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 50 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದು ಕಾಂಗ್ರೆಸ್‌ನ ಎಲ್ಲ ಮುಖಂಡರು ಸೇರಿ ಅವರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ನೀಡುತ್ತಿದ್ದೇವೆ” ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. 
ಇದರೊಂದಿಗೆ   ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಪರಿಹಾರ ನೀಡುವುದರ ಜೊತೆಗೆ ಸರ್ಕಾರಿ ಉದ್ಯೋಗ ನೀಡುವಂತೆ ಹರಿಯಾಣ ಸರ್ಕಾರಕ್ಕೆ ಅವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!