ನಟ ದಿ.ಸುಶಾಂತ್ ಸಿಂಗ್ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿನ ಪ್ರಕರಣ: ತನಿಖೆಗೆ ಎಸ್‍ಐಟಿ ರಚನೆ

ನಾಗ್ಪುರ ಡಿ.22 : ನಟ ದಿ. ಸುಶಾಂತ್ ಸಿಂಗ್ ರಜಪೂತ್ ಅವರ ವ್ಯವಸ್ಥಾಪಕಿಯಾಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣದ ತನಿಖೆಯ ನೇತೃತ್ವ ವಹಿಸಲು ವಿಶೇಷ ತನಿಖಾ ದಳವನ್ನು (ಎಸ್‍ಐಟಿ) ರಚಿಸಲಾಗುವುದು’ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಹೇಳಿದ್ದಾರೆ.

ಈ ಬಗ್ಗೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಅವರು, ಮುಂಬೈ ಪೊಲೀಸರು ನಡೆಸುತ್ತಿರುವ ಈ ಪ್ರಕರಣದ ತನಿಖೆಯನ್ನು ಇನ್ನು ಮುಂದೆ ಎಸ್‍ಐಟಿ ನೇತೃತ್ವ ವಹಿಸಿಕೊಳ್ಳಲಿದೆ’ ಎಂದು ತಿಳಿಸಿದರು.

ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು, ‘ತನಿಖೆಯನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು’ ಎಂದು ಹೇಳಿದ್ದಕ್ಕೆ ಪ್ರತಿಯಾಗಿ ಫಡ್ನವಿಸ್ ಅವರು , ‘ಯಾರನ್ನೂ ಗುರಿಯಾಗಿಸದೇ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತದೆ’ ಎಂದರು.

Leave a Reply

Your email address will not be published. Required fields are marked *

error: Content is protected !!