ತುಮಕೂರಿನ ಗುತ್ತಿಗೆದಾರ ಆತ್ಮಹತ್ಯೆ: ಬಿಜೆಪಿಯ 40% ಕಮಿಷನ್ ಲೂಟಿಗೆ ಮತ್ತೊಂದು ಬಲಿ-ಕಾಂಗ್ರೆಸ್ ಆರೋಪ

ತುಮಕೂರು, ಡಿ.31 : ತುಮಕೂರಿನ ಗುತ್ತಿಗೆದಾರ ಟಿ.ಎನ್ ಪ್ರಸಾದ್ ಭ್ರಷ್ಟ ಬಿಜೆಪಿ ಸರ್ಕಾರದ ಕಮಿಷನ್ ಕಿರುಕುಳಕ್ಕೆ ಬಲಿಯಾಗಿದ್ದಾರೆ’ ಎಂದು ಕಾಂಗ್ರೆಸ್ ಆರೋಪಿಸಿದೆ.

ದೇವರಾಯನ ದುರ್ಗದ ಪ್ರವಾಸಿ ಮಂದಿರದಲ್ಲಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ರಾಜ್ಯ ಬಿಜೆಪಿ ಸರಕಾರ ಮತ್ತು ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಟ್ವೀಟ್ ಮಾಡಿ, ”ಭ್ರಷ್ಟ ಬಿಜೆಪಿಯ 40% ಕಮಿಷನ್ ಲೂಟಿಗೆ ಮತ್ತೊಂದು ಬಲಿಯಾಗಿದೆ. ಸಾಲ ಮಾಡಿ ಕಾಮಗಾರಿಗೆ ಹಣ ಹೂಡಿದ್ದ ತುಮಕೂರಿನ ಗುತ್ತಿಗೆದಾರ ಟಿ.ಎನ್ ಪ್ರಸಾದ್ ಭ್ರಷ್ಟ ಬಿಜೆಪಿ ಸರ್ಕಾರದ ಕಮಿಷನ್ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಅಮಿತ್ ಶಾ ಅವರೇ, ರಾಜ್ಯದ ಗುತ್ತಿಗೆದಾರರೊಂದಿಗೆ ಸಮಾಲೋಚನೆ ನಡೆಸುವ, 40% ಕಮಿಷನ್ ವಿರುದ್ದ ಕ್ರಮ ಕೈಗೊಳ್ಳುವ ಧಮ್ಮು, ತಾಕತ್ತು ಇದೆಯೇ?” ಎಂದು ಪ್ರಶ್ನೆ ಮಾಡಿದೆ.

Leave a Reply

Your email address will not be published. Required fields are marked *

error: Content is protected !!