ಮಲೆನಾಡ ದುರಂತ ; ಪ್ರಧಾನಿ ಸಂತಾಪ

ಶಿವಮೊಗ್ಗ: ನಗರದ ಹೊರವಲಯದ ಹುಣಸೋಡು ಗ್ರಾಮದ ಬಳಿ ಇರುವ ಕ್ರಷರ್‌ನಲ್ಲಿ ಭಾರೀ ಪ್ರಮಾಣ ಸ್ಪೋಟ ಸಂಭವಿಸಿದ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ. 
      ಈ ಕುರಿತು ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದಲ್ಲಿ ನಡೆದ ಪ್ರಾಣಹಾನಿ ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಶೀಘ್ರವೇ ಗಾಯಗೊಂಡವರು ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ.   

ಸದ್ಯ ಘಟನಾ ಸ್ಥಳಕ್ಕೆ ಯಾರೂ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದ್ದು, ಯಾರನ್ನೂ ಒಳಗೆ ಬಿಡುತ್ತಿಲ್ಲ. ಸುತ್ತಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಭಾರಿ ಪ್ರಮಾಣದ ಸ್ಫೋಟಕ ತಂದಿರುವ ಹಿನ್ನೆಲೆಯಲ್ಲಿ, ಅವೆಲ್ಲವು ರಾತ್ರಿಯೇ ಸ್ಫೋಟಗೊಂಡಿರಬಹುದು. ಒಂದು ವೇಳೆ  ಸ್ಫೋಟಕಗಳು ಸಜೀವ ಸ್ಥಿತಿಯಲ್ಲಿದ್ದರೆ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಪರಿಶೀಲಿಸಿದ ಬಳಿಕ ಮುಂದಿನ ಕಾರ್ಯಾಚರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ

Leave a Reply

Your email address will not be published. Required fields are marked *

error: Content is protected !!