ಪಕ್ಷ ವಿರೋಧಿ ಹೇಳಿಕೆ – ಕೆಜಿಎಫ್ ಬಾಬುವನ್ನು ಪಕ್ಷದಿಂದ ಅಮಾನತು ಮಾಡಿದ ಕಾಂಗ್ರೆಸ್

ಬೆಂಗಳೂರು ಜ.7 : ಕೆಜಿಎಫ್ ಬಾಬು ಅವರನ್ನು ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಅಮಾನತು ಕೆಪಿಸಿಸಿ ಶಿಸ್ತು ಸಮಿತಿ ಮುಖ್ಯಸ್ಥ ರಹಮಾನ್ ಖಾನ್ ಅವರು ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲೇ ಮಾತನಾಡಿದ ಕೆಜಿಎಫ್ ಬಾಬು ಅವರು, ಕಾಂಗ್ರೆಸ್ ನವರು ಅತಿಯಾದ ಆತ್ಮವಿಶ್ವಾಸದಲ್ಲಿ ಇದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ಸೀಟ್ ಬರಲ್ಲ ಎಂದ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಕೆಜಿಎಫ್ ಬಾಬು ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಕೆಜಿಎಫ್ ಬಾಬು ನಡೆಯಿಂದ ಈ ಹಿಂದೆ ನೀಡಲಾಗಿದ್ದ 3 ಶೋಕಾಸ್ ನೋಟಿಸ್ ಗೆ ಉತ್ತರ ನೀಡಿರಲಿಲ್ಲ. ಇದೀಗ ಅಂತಿಮವಾಗಿ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!