ಆಸ್ಕರ್ ರೇಸ್ ನಲ್ಲಿ ಕನ್ನಡದ “ಕಾಂತಾರ”

ಬೆಂಗಳೂರು ಜ.10 : ದೇಶದಾದ್ಯಂತ ಜನಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ನಿರ್ದೇಶನ ‘ಕಾಂತಾರ’ ಸಿನಿಮಾ ಇದೀಗ ಆಸ್ಕರ್ ರೇಸ್ ನಲ್ಲಿ ಸ್ಥಾನ ಪಡೆದುಕೊಂಡಿದೆ.

ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಟ್ವಿಟರ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ‘ಕಾಂತಾರ’ ಚಿತ್ರಕ್ಕೆ 2 ಆಸ್ಕರ್ ಅರ್ಹತೆ ಸಿಕ್ಕಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ! ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಪ್ರಯಾಣವನ್ನು ಹಂಚಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ ಎಂದು ಬರೆದುಕೊಂಡಿದೆ.

ಇತ್ತೀಚೆಗೆ ‘ಕಾಂತಾರ’ ಸಿನಿಮಾವನ್ನು ಆಸ್ಕರ್ ಗೆ ಕಳುಹಿಸಲು ಅರ್ಜಿ ಸಲ್ಲಿಸಿದ್ದೇವೆ ಎಂದು ನಿರ್ಮಾಪಕ ವಿಜಯ್ ಕಿರಂದೂರು ಅವರು ಹೇಳಿದ್ದರು. ಟ್ವಟರ್ ನಲ್ಲಿ ಕಾಂತಾರಕ್ಕೆ ಆಸ್ಕರ್ ಸಿಗಬೇಕೆಂದು ಹಲವು ಮಂದಿ ಆಗ್ರಹಿಸಿದ್ದರು. ಪ್ರೇಕ್ಷಕರ ಮನವಿಯಂತೆ ಚಿತ್ರ ತಂಡ ಆಸ್ಕರ್ ಗಾಗಿ ಕಾಂತಾರವನ್ನು ಪರಿಗಣಿಸುವಂತೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ಈಗ ಆಸ್ಕರ್ ಒಪ್ಪಿಕೊಂಡಿದ್ದು, ಆ ಮೂಲಕ ‘ಕಾಂತಾರ’ ಸಿನಿಮಾ ಕೂಡ ಆಸ್ಕರ್ ರೇಸ್ ನಲ್ಲಿ ಕಾಣಿಸಿಕೊಳ್ಳಲಿದೆ. ಹಾಗೂ ಈ ವರ್ಷದ ಆಸ್ಕರ್ ಪ್ರಶಸ್ತಿಯ ಅಂತಿಮ ನಾಮ ನಿರ್ದೇಶನ ಜ. 24ರಂದು ಘೋಷಣೆಯಾಗಲಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!