ಸಿದ್ದರಾಮಯ್ಯ ಕೋಲಾರ ಸ್ಪರ್ಧೆ: ಬಿಜೆಪಿ ಟೀಕೆ

ಬೆಂಗಳೂರು ಜ.13 : ಇತ್ತೀಚೆಗಷ್ಟೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ ಮುಂದಿನ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸುವುವ ಬಗ್ಗೆ ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದರು.

ಇದೀಗ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಲು ಇಚ್ಚಿಸಿರುವ ಬಗ್ಗೆ ಸರಣಿ ಟ್ವೀಟ್ ಮೂಲಕ ಬಿಜೆಪಿ ಟೀಕೆ ಮಾಡಿದ್ದು, `ಕೊನೆಯ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಸಿದ್ದರಾಮಯ್ಯ ಇಷ್ಟು ದಿನ ಹುಡುಕಾಟ ನಡೆಸಿ ಸೀಟು ಖರೀದಿಸಿರುವ ಸಂಗತಿ ನಿಜಕ್ಕೂ ನಾಚಿಕೆಗೇಡು. ಆದರೆ ಶ್ರೀನಿವಾಸ ಗೌಡರ ಜತೆ 17 ಕೋಟಿ ರೂ.ಗೆ ಮಾಡಿಕೊಂಡಿರುವ ಡೀಲ್ ಪ್ರಜಾಪ್ರಭುತ್ವದ ಪಾಲಿನ ದುರಂತ ಕಾಂಗ್ರೆಸ್ ಅಧ್ಯಕ್ಷರು (ಡಿ.ಕೆ ಶಿವಕುಮಾರ್) ಟಿಕೆಟ್ ಮಾರಾಟಕ್ಕಿಟ್ಟರೆ, ವಿರೋಧ ಪಕ್ಷದ ನಾಯಕರು ಸೀಟನ್ನೇ ಖರೀದಿ ಮಾಡುವವರು, ಚುನಾವಣಾ ರಾಜಕಾರಣದಲ್ಲಿ ಹಿಂದೆಂದೂ ಕಂಡು ಕೇಳರಿಯದ ಅಕ್ರಮ-ಸಕ್ರಮ ಯೋಜನೆಗಳನ್ನು ಕಾಂಗ್ರೆಸ್ ಚಾಲನೆಗೆ ತಂದಿದೆ’ ಎಂದು ಹೇಳಿದೆ.

“ಹಲವು ಕೆಟ್ಟ ಪರಂಪರೆ ಹುಟ್ಟುಹಾಕಿದ ಕೀರ್ತಿ ಇರುವ ಕಾಂಗ್ರೆಸ್‍ನ ಕಿರೀಟಕ್ಕೆ ಕೋಲಾರ ಸೀಟು ಖರೀದಿ ಪ್ರಹಸನ ಮತ್ತೊಂದು ಗರಿ. ಅಸ್ತಿತ್ವಕ್ಕಾಗಿ ಮಾಡುವ ಕೊನೆಯ ಹೋರಾಟಗಳಲ್ಲಿ ಎಲ್ಲಾ ನೀತಿಗಳನ್ನೂ ಬದಿಗೊತ್ತಲಾಗುತ್ತದೆ. ಆದರೆ ಈ ಪ್ರಮಾಣದಲ್ಲಿ ಆಗುತ್ತಿರುವುದು ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಮಾರಕ. ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯ ಬಾದಾಮಿಯಲ್ಲಿ ಹಣಬಲ ಬಳಸಿಯೂ ಅತಿಕಡಿಮೆ ಅಂತರದಿಂದ ಬಚಾವಾಗಿ ಬಂದರು. ಪ್ರತಿಬಾರಿ ಹೊಸಹೊಸ ಮಂದಿಗೆ ಮೋಸ ಮಾಡುವ ಅವರ ಈ ಬಾರಿಯ ಆಯ್ಕೆ ಕೋಲಾರ. ಆದರೆ ಅವರ ಕುಟಿಲತನವನ್ನು ಕೋಲಾರ ಜನತೆ ಆರಂಭದಲ್ಲೇ ನೋಡಿದ್ದಾರೆ’ ಎಂದಿದೆ.

‘ಎಲ್ಲರನ್ನೂ ಎಲ್ಲಾ ಸಂದರ್ಭಗಳಲ್ಲೂ ಕೊಳ್ಳುವುದಕ್ಕೆ ಸಾಧ್ಯವಿಲ್ಲ ಸಿದ್ದರಾಮಯ್ಯನವರೇ, ನೀವು ಅಧಿಕಾರದ ಮದದಲ್ಲಿ ಡಿ.ಕೆ. ರವಿಯವರ ಧ್ವನಿ ಅಡಗಿಸಿದಿರಿ. ಹಣಬಲದಿಂದ ಪ್ರಕರಣದ ಸೊಲ್ಲಡಗಿಸಿದಿರಿ. ಈಗ ಕ್ಷೇತ್ರ ಖರೀದಿಸಿದ್ದೀರಿ, ಆದರೆ ಮತದಾರರ ಖರೀದಿ ಸಾಧ್ಯವಿಲ್ಲ, ಈ ಬಾರಿ ಕೋಲಾರದ ಜನತೆ ನಿಮಗೆ ಕಲಿಸಲಿದ್ದಾರೆ ಎಂದು ಹೇಳಿದೆ.

Leave a Reply

Your email address will not be published. Required fields are marked *

error: Content is protected !!