ಕೊಡಗು: ಕತ್ತಿಯಿಂದ ಕೊಚ್ಚಿ ಯುವತಿಯ ಬರ್ಬರ ಹತ್ಯೆ

ಕೊಡಗು ಜ.16 : ಜಿಲ್ಲೆಯ ವಿರಾಜಪೇಟೆಯಲ್ಲಿ ಯುವತಿಯೋರ್ವಳನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ನಿನ್ನೆ ರಾತ್ರಿ ನಡೆದಿದೆ.

ಕೊಲೆಯಾದ ಯುವತಿಯನ್ನು ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದ ಬುಟ್ಟಿಯಂಡಪ್ಪ ಮಾದಪ್ಪ, ಸುನಂದ ಅವರ ಪುತ್ರಿ ಬುಟ್ಟಿಯಂಡ ಆರತಿ (24) ಎಂದು ಗುರುತಿಸಲಾಗಿದೆ. ತಮ್ಮಯ್ಯ ಕೊಲೆ ಗೈದ ಆರೋಪಿ.

ಆರತಿಗೆ ಆರೋಪಿ ತಮ್ಮಯ್ಯ ಕೆಲ ದಿನಗಳಿಂದ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ನಡುವೆ ಕೊಲೆ ಗೈದ ಆರೋಪಿ ತಮ್ಮಯ್ಯ ನಾಂಗಾಲದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಳೆದ ರಾತ್ರಿ ಆರತಿಯನ್ನು ಮನೆ ಸಮೀಪವೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಸ್ಥಳದಲ್ಲಿ ಆರೋಪಿ ತಮ್ಮಯ್ಯನಿಗೆ ಸೇರಿದ್ದು ಎನ್ನಲಾದ ಹೆಲ್ಮೆಟ್ ಪತ್ತೆಯಾಗಿದ್ದರೆ, ಅನತಿ ದೂರದಲ್ಲಿ ಆತನ ಬೈಕ್ ಕೂಡ ಪತ್ತೆಯಾಗಿದೆ. ಆದ್ದರಿಂದ ಆರೋಪಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!