ಆತ್ಮಹತ್ಯೆಗೆ ಕಟ್ಟಿದ್ದ ಪಂಚೆ ಹರಿದು ಮರದಿಂದ ಬಿದ್ದ ಯುವಕ ಮೃತ್ಯು

ದೊಡ್ಡಬಳ್ಳಾಪುರ ಜ.17 : ಆತ್ಮಹತ್ಯೆ ಮಾಡಿಕೊಳ್ಳಲು ಮರಕ್ಕೆ ಕಟ್ಟಿದ್ದ ಪಂಚೆ ಹರಿದು ಮರದಿಂದ ಬಿದ್ದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರದ ಭಗತ್‍ಸಿಂಗ್ ಕ್ರೀಡಾಂಗಣದ ಸಮೀಪ ನಿನ್ನೆ ನಡೆದಿದೆ.

19 ವರ್ಷದ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಮರಕ್ಕೆ ಪಂಚೆ ಕಟ್ಟಿದ್ದ. ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ಪಂಚೆ ಹರಿದು ಯುವಕ ಮರದಿಂದ ನೆಲಕ್ಕೆ ಬಿದ್ದಿದ್ದಾನೆ. ಪರಿಣಾಮ ಯುವಕನ ತಲೆಗೆ ಪೆಟ್ಟು ಬಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!