ಕೋಟ್ಯಾಂತರ ರೂಪಾಯಿ ವಂಚನೆ, ಆರೋಪಿಯ ಆಸ್ತಿ ಜಪ್ತಿ : ನ್ಯಾಯಾಲಯ ಆದೇಶ

ಬೆಂಗಳೂರು: ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಎದುರಿಸುತ್ತಿರುವ ಯುವರಾಜ್‌ನ ಆಸ್ತಿ ಜಪ್ತಿಗೆ ಬೆಂಗಳೂರಿನ ಸಿಸಿಹೆಚ್ 67ನೇ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿದೆ. 

ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವರಾಜ್‌ನ ಬೆಂಗಳೂರು ಉತ್ತರ, ಹಾಸನ, ಮದ್ದೂರು, ದ್ವಾರ ಕೊತ್ತನ ಹಳ್ಳಿಯಲ್ಲಿರುವ ನಿವೇಶನಗಳು ಮತ್ತು ಮನೆಗಳು, ಜಮೀನು ಸೇರಿ ಒಟ್ಟು 26 ಆಸ್ತಿ ಜಪ್ತಿಮಾಡಲು ಕೋರ್ಟ್ ಆದೇಶ ಹೊರಡಿಸಿದೆ. ಇದೀಗ ಆರೋಪಿ ಯುವರಾಜ್‌ಗೆ ಸೇರಿದ ಸುಮಾರು 80 ರಿಂದ 90 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಆಗಲಿದ್ದು, ಇದರೊಂದಿಗೆ  ಯುವರಾಜ್‌ನ ಪತ್ನಿ ಆಸ್ತಿ ಕೂಡ ಜಪ್ತಿ ಆಗಲಿದೆ ಎನ್ನಲಾಗುತ್ತಿದೆ. 
ಆರೋಪಿ ಯುವರಾಜ್ ಅನೇಕ ಮಂದಿಗೆ ರಾಜ್ಯಪಾಲರ ಹುದ್ದೆ, ಸರ್ಕಾರಿ ನೌಕರಿ, ಮೆಡಿಕಲ್ ಸೀಟ್, ನಿಗಮ-ಮಂಡಳಿಗಳಿಗೆ ಅಧ್ಯಕ್ಷ ಸ್ಥಾನ ಹೀಗೆ ಅನೇಕ ಹುದ್ದೆಗಳನ್ನು ಕೊಡಿಸುವುದಾಗಿ ವಂಚಿಸಿ ಕೋಟ್ಯಾಂತರ ರೂಪಾಯಿ ಪಡೆದು ವಂಚಿಸಿದ್ದು, ಈತನ ವಿರುದ್ಧ ಹಲವು ನಗರ ಪೊಲೀಸ್ ಠಾಣೆಗಳಲ್ಲಿ 14 ಪ್ರಕರಣಗಳು ದಾಖಲಾಗಿದವೆ.

Leave a Reply

Your email address will not be published. Required fields are marked *

error: Content is protected !!