ತನಿಖೆಯಾದರೆ ಸಚಿವ ಸುಧಾಕರ್ ಮೇಲಿನ ಆರೋಪಗಳು ಸಾಬೀತಾಗುತ್ತದೆ-ಸಿದ್ದರಾಮಯ್ಯ

ಚಾಮರಾಜನಗರ ಜ.26 : ಕೋವಿಡ್ ಸಮಯದಲ್ಲಿ ನಡೆದ ಹಗರಣದ ತನಿಖೆ ನಡೆದರೆ ಸಚಿವ ಡಾ.ಸುಧಾಕರ್ ಮೇಲಿನ ಆರೋಪಗಳು ಸಾಬೀತಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕೋವಿಡ್ ಸಮಯದಲ್ಲಿ ಹಗರಣ ನಡೆದಿಲ್ಲ. ಸಾಬೀತಾದರೆ ಸಾರ್ವಜನಿಕವಾಗಿ ನೇಣು ಹಾಕಿ’ ಎಂದಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, `ಆತ ನೇಣುಹಾಕಿಕೊಳ್ಳುವುದೇನೂ ಬೇಡ, ಬದುಕಿರಲಿ. ಮೊದಲು ಹಗರಣದ ಬಗ್ಗೆ ತನಿಖೆ ಮಾಡಲಿ, ಅವರ ಮೇಲಿನ ಆರೋಪಗಳು ಸಾಬೀತಾಗುತ್ತವೆ. ರಾಜ್ಯ ಹಾಗೂ ಕೇಂದ್ರದಲ್ಲಿ ಅವರದ್ದೇ ಸರ್ಕಾರದ ಇದೆ. ತನಿಖೆ ಮಾಡಬೇಕಾಗಿರುವವರೂ ಅವರೇ’ ಎಂದರು.

ಕೋವಿಡ್ ಸಮಯದಲ್ಲಿ ಚಾಮರಾಜನಗರದಲ್ಲಿ ಆಮ್ಲಜನಕ ಇಲ್ಲದೆ 36 ಜನರು ಸತ್ತರು. ಅವರ ಸಾವಿಗೆ ಸುಧಾಕರ್ ಕಾರಣ. 36 ಜನರು ಮೃತಪಟ್ಟರೂ ಮೂವರು ಮೃತಪಟ್ಟರು ಎಂದು ಸುಳ್ಳು ಹೇಳಿದ್ದ ಆತ ಸಚಿವರಾಗಲು ಲಾಯಕ್ಕಿಲ್ಲ’ ಎಂದರು ಹಾಗೂ ‘ನಾವು ಉಚಿತ ಭಾಗ್ಯಗಳನ್ನು ಘೋಷಣೆ ಮಾಡುತ್ತಿಲ್ಲ. ನಾವು ಏನು ಮಾಡುತ್ತೇವೆಯೋ ಅದನ್ನು ಹೇಳುತ್ತಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಸಿ.ಟಿ.ರವಿ ಹಗಲು ಕನಸು ಕಾಣುತ್ತಿದ್ದಾರೆ. ಮುಂದೆ ನಾವೇ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಸತ್ಯ, ನಾವು ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆಯೋ ಅದನ್ನೇ ಹೇಳುತ್ತಿದ್ದೇವೆ’ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!