ಮಂಗಳೂರಿನ ಕಲ್ಲಾಪು ಬಳಿ ನದಿಯಲ್ಲಿ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ
ಮಂಗಳೂರು, ಜ.30 : ಕಲ್ಲಾಪು ಸನಿಹ ನೇತ್ರಾವತಿ ನದಿಯಲ್ಲಿ ಇಂದು ಬೆಳಿಗ್ಗೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಮೃತ ವ್ಯಕ್ತಿಯು ಲುಂಗಿ, ಟೀ-ಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಕಡ ಪತ್ತೆಯಾಗಿದೆ. ಈ ವ್ಯಕ್ತಿಯು ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ನದಿ ಮಧ್ಯದಲ್ಲಿ ತೇಲುತ್ತಿದ್ದ ಮೃತದೇಹವನ್ನು ಸಮಾಜ ಸೇವಕ ಪ್ರೇಮ್ ಪ್ರಕಾಶ್ ಡಿಸೋಜ ಅವರು ದಡಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.