ಕೆಲಸ ನಿರಕಾರಿಸಿರುವ ಕುರಿತು ಪರಿಹಾರ ನೀಡುವಂತೆ ಬೀಡಿ ಕಾರ್ಮಿಕರಿಂದ ಮನವಿ

ಉಡುಪಿ ಜ.30 (ಉಡುಪಿ ಟೈಮ್ಸ್ ವರದಿ): ಕಳೆದ ಕೆಲ ದಿನಗಳಿಂದ ಕಂಪೆನಿಯು ಕೆಲಸ ನೀಡದೇ ಇರುವುದರಿಂದ ಬೀಡಿ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದು, ಮತ್ತೆ ಕಾರ್ಮಿಕರಿಗೆ ಕೆಲಸ ಕೊಡಿಸುವಂತೆ ಮಾಡಿ ಹಾಗೂ ಪರಿಹಾರ ನೀಡುವಂತೆ ಆಗ್ರಹಿಸಿ ಬೀಡಿ ಕಾರ್ಮಿಕರ ನಿಯೋಗ ಕಾರ್ಮಿಕ ಅಧಿಕಾರಿಯವರಲ್ಲಿ ಮನವಿ ಮಾಡಿಕೊಂಡಿದೆ.

ಕಾರ್ಮಿಕ ಅಧಿಕಾರಿಯವರಿಗೆ ಸಲ್ಲಿಸಿರುವ ಮನವಿಯಲ್ಲಿ, ಉಡುಪಿ ಮತ್ತು ದ.ಕ ಜಿಲ್ಲೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಬೀಡಿ ಕಾರ್ಮಿಕರು ಇದ್ದಾರೆ. ಜಿಲ್ಲೆಯಲ್ಲಿ ಇರುವ ಬೀಡಿ ಕಾರ್ಮಿಕರು ಬೀಡಿ ಉದ್ಯಮವನ್ನು ನಂಬಿ ಬೀಡಿ ಕಟ್ಟಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಇತ್ತೀಚೆಗೆ ಜ.21 ರಿಂದ ಭಾರತ್ ಬೀಡಿ ಕಂಪನಿ ಹಾಗೂ ಪ್ರಕಾಶ್ ಬೀಡಿ ಕಂಪನಿಯವರು ಬೀಡಿ ಕಾರ್ಮಿಕರಿಗೆ ಕೆಲಸ ಕೊಡದೆ ನಿಲ್ಲಿಸಿದ್ದಾರೆ. ಈ ಬಗ್ಗೆ ಕಂಪನಿಯ ಜೊತೆ ಎರಡು ಬಾರಿ ಬೀಡಿ ಕಾರ್ಮಿಕ ಸಂಘದ ಮುಖಂಡರು, ಬೀಡಿ ಕನ್ಟ್ರಟ್ ದಾರರು, ಕಂಪನಿಯ ಮಾಲಕರ ಜೊತೆ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಬೀಡಿ ಕಾರ್ಮಿಕರಿಗೆ ಕೆಲಸ ಇಲ್ಲದೇ ಕಾರ್ಮಿಕರು ಬೀದಿ ಪಾಲಾಗುವ ಸಾಧ್ಯತೆ ಇದೆ. ಆದ್ದರಿಂದ ಈ ಕೂಡಲೇ ಕಾರ್ಮಿಕ ಅಧಿಕಾರಿಗಳು ಮಧ್ಯಪ್ರವೇಶಿಸಿ ಕಾರ್ಮಿಕರಿಗೆ ಕೆಲಸ ಕೊಡಿಸಬೇಕು ಹಾಗೂ ರಾಜಾದಿನದ ವೇತನ, ಪರಿಹಾರ ಸೀಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ನೀಯೋಗದಲ್ಲಿ ಉಡುಪಿ ಬೀಡಿ ಮತ್ತು ಟೋಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷರಾದ ನಳಿನಿ.ಎಸ್, ಪ್ರಧಾನ ಕಾರ್ಯದರ್ಶಿ ಉಮೇಶ್ ಕುಂದರ್, ಕುಂದಾಪುರ ತಾಲೂಕು ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷ ಬಳ್ಕೀಸ್ ಬಾನು, ಪ್ರಧಾನ ಕಾರ್ಯದರ್ಶಿ ಮಹಾಬಲ ಹೋಡೆಯರ ಹೋಬಳಿ, ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷೆ ಸುನೀತ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್, ಸಿಐಟಿಯು ಉಡುಪಿ ಜಿಲ್ಲಾ ಖಜಾಂಚಿ ಶಶಿಧರ ಗೋಲ್ಲ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!