ಉಡುಪಿ: ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ಅಭಿಯಾನ

ಉಡುಪಿ ಜ.30 (ಉಡುಪಿ ಟೈಮ್ಸ್ ವರದಿ): ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಮತ್ತು ನಗರ ಸಭೆಯ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಚ್ಚತಾ ದಿನಾಚರಣೆ ಪ್ರಯುಕ್ತ ಇಂದು ಬೆಳಿಗ್ಗೆ ಕೋರ್ಟ್ ಆವರಣದಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಶಾಂತವೀರ ಶಿವಪ್ಪ ಮತ್ತು ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ನ್ಯಾಯಾಲಯದ ಆವರಣ ಸ್ವಚ್ಛಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ಹಿರಿ ಕಿರಿಯ ನ್ಯಾಯಾಧೀಶರು ಮತ್ತು ನ್ಯಾಯವಾದಿಗಳು ಕೋರ್ಟ್ ಆವರಣ ಸ್ವಚ್ಚಗೊಳಿಸುವ ಮೂಲಕ ಅಭಿಯಾನಕ್ಕೆ ಸಾಥ್ ನೀಡಿದರು. ಜೊತೆಗೆ ನ್ಯಾಯಾಲಯ ಸಿಬ್ಬಂದಿ ಮತ್ತು ನಗರಸಭೆ ಪೌರ ಕಾರ್ಮಿಕರು ಈ ಕಾರ್ಯದಲ್ಲಿ ಸಹಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಶರ್ಮಿಳಾ ಎಸ್, ನ್ಯಾ.ಶಕುಂತಲಾ, ನ್ಯಾ.ನಟೇಶ್, ನ್ಯಾ.ಸೋಮನಾಥ್, ನ್ಯಾ.ಶ್ಯಾಮ್ ಪ್ರಕಾಶ್, ನ್ಯಾ.ಜೀತು ಎಸ್,ನ್ಯಾ. ವಿನಾಯಕ ವಾಂಕಡೆ ಸ್ವಚ್ಛತೆಯಲ್ಲಿ ಭಾಗವಹಿಸಿದರು.

Leave a Reply

Your email address will not be published. Required fields are marked *

error: Content is protected !!