ಮಣಿಪಾಲ: ಮಾದಕ ವಸ್ತು ಸೇವೆ- ಇಬ್ಬರು ಪೊಲೀಸ್ ವಶಕ್ಕೆ

ಮಣಿಪಾಲ ಜ.31 (ಉಡುಪಿ ಟೈಮ್ಸ್ ವರದಿ): ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲದ ವಿದ್ಯಾರತ್ನ ನಗರದ ಪರಿಸರದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಪೊಲೀಸರು, ಜ.24 ರಂದು ಉಡುಪಿಯ ಶಿವಳ್ಳಿ ಗ್ರಾಮದ ಮಣಿಪಾಲ ವಿದ್ಯಾರತ್ನ ನಗರದ ಅಪಾರ್ಟ್‍ಮೆಂಟ್ ವೊಂದರ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಮೋಹಿತ್ ಖಾರೆ ಹಾಗೂ ಸಾಕ್ಷಿ ಶ್ರೀಯಾನ್ ಎಂಬ ಇಬ್ಬರನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು.

ಇವರಿಬ್ಬರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಇಬ್ಬರೂ ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದು ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!