ಕೇಂದ್ರ ಬಜೆಟ್ ಕೇವಲ ಘೋಷಣೆಯ ಬಜೆಟ್-ಹರೀಶ್ ಕಿಣಿ

ಉಡುಪಿ ಫೆ.1 (ಉಡುಪಿ ಟೈಮ್ಸ್ ವರದಿ): ಕೇಂದ್ರ ಬಜೆಟ್ ಕೇವಲ ಘೋಷಣೆಯ ಬಜೆಟ್ ಆಗಿದೆ. ಜನರಿಗೆ ಭಾರವಾಗಿರುವ ಪೇಟ್ರೋಲ್, ಡಿಸೇಲ್, ಪಡಿತರ ಎಣ್ಣೆ, ದಿನಬಳಕೆ ಗ್ಯಾಸ್ ಗಳ ಬೆಲೆಯಲ್ಲಿ ಇಳಿಕೆ ಇಲ್ಲದಿರುವುದು ನಿರಾಸೆ ಮೂಡಿಸಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ ಅವರು ಹೇಳಿದ್ದಾರೆ.

ಇಂದಿನ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಧ್ಯಮ ವರ್ಗದ ಮೇಲಿನ ತೆರಿಗೆ ವಿನಾಯಿತಿ ಸ್ಪಲ್ಪ ಮಟ್ಟಿನ ಸಮಾಧಾನ ಮೂಡಿಸಿದೆಯೇ ಹೊರತು, ಮಧ್ಯಮ ವರ್ಗದವರ ಜನರ ಜೀವನ ದುರ್ಬಲವಾಗಿರುವ ಈ ಸಂದರ್ಭದಲ್ಲಿ ಅವರನ್ನು ಮೇಲಕ್ಕೆತ್ತುವ ಕೆಲಸ ಆಗಿಲ್ಲ. ರೈತರಿಗೆ, ಕೂಲಿ ಕಾರ್ಮಿಕರಿಗೆ, ಮಹಿಳೆಯರಿಗೆ, ಯುವಜನರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಈ ಬಜೆಟ್ ಏನನ್ನು ನೀಡಿಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣ ಕ್ಷೇತ್ರಕ್ಕೆ ವಿನಿಯೋಗ 2% ಕ್ಕಿಂತ ಕಡಿಮೆಯಿದೆ. ಇದು ಘೋಷಣೆಗಳ ಮತ್ತು ಕೇವಲ ಪ್ರಚಾರದ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!