ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ

ಬೆಂಗಳೂರು; ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕುಟುಂಬ ಕಲಹದಿಂದ ಮನೆಯಿಂದ ದೂರ ಉಳಿದಿದ್ದ ಅವರು, ವೃದ್ಧಾಶ್ರಮದಲ್ಲಿದ್ದರು ಎಂದು ಹೇಳಲಾಗಿದೆ. ಅಲ್ಲದೆ ಕೌಟುಂಬಿಕ ಕಲಹ ಹಾಗೂ ಸಿನೆಮಾ ಕ್ಷೇತ್ರದ ಅವಕಾಶದಿಂದ ವಂಚಿತರಾಗಿದ್ದ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದೂ ಹೇಳಲಾಗುತ್ತಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಟಿ ಜಯಶ್ರೀ ಈ ಹಿಂದೆಯೂ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ಸಾವಿನ ಬಗ್ಗೆ ಮಾತನಾಡಿದ್ದ ನಟಿ ಜಯಶ್ರೀ 7 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಹೇಳಿಕೊಂಡಿದ್ದರು. ಇದೀಗ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ಪೊಲೀಸ್ ತನಿಖೆಯಿಂದಷ್ಟೆ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬರಬೇಕಿದೆ.

ಮೃತ ನಟಿ ಜಯಶ್ರೀ ಅವರು, ಕನ್ನಡ ಗೊತ್ತಿಲ್ಲ ಹಾಗೂ ಉಪ್ಪು ಹುಳಿ ಖಾರ ಚಿತ್ರದಲ್ಲಿ ನಟಿಸಿದ್ದಾರೆ. ಅಲ್ಲದೇ ಕನ್ನಡ ಬಿಗ್ ಬಾಸ್ 3ರ ಶೋನಲ್ಲೂ ಸ್ಪರ್ಧಿಯಾಗಿದ್ದ ಇವರು ಇತ್ತೀಚೆಗೆ ಚಿತ್ರರಂಗದಿಂದಲೂ ದೂರ ಉಳಿದಿದ್ದರು.

Leave a Reply

Your email address will not be published. Required fields are marked *

error: Content is protected !!