ಉಡುಪಿ: ಫೆ.11-12- ರಾಜ್ಯ ಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನ- ಸಿಎಂ ಬೊಮ್ಮಾಯಿ ಉದ್ಘಾಟನೆ

ಉಡುಪಿ ಫೆ.2: ರಾಜ್ಯ ಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನದ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ.11 ರಂದು ಉಡುಪಿಗೆ ಆಗಮಿಸಲಿದ್ದಾರೆ.

ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದ್ದು, ಉಡುಪಿಯಲ್ಲಿ ಫೆ.11- 12ರಂದು ನಡೆಯಲಿರುವ ರಾಜ್ಯದ ಮೊದಲ ಸಮಗ್ರ ಯಕ್ಷಗಾನ ಸಮ್ಮೇಳನಕ್ಕೆ ಉದ್ಘಾಟಕರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉಡುಪಿಗೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಮತ್ತು ಮುಂದಿನ ಸವಾಲುಗಳನ್ನು ಎದುರಿಸುವ ಬಗ್ಗೆ ಹಾಗೂ ಹೊಸ ಪೀಳಿಗೆಗೆ ಯಕ್ಷಗಾನದ ಅರಿವು ಮೂಡಿಸುವುದರ ಕುರಿತು ಸಮಗ್ರ ಚರ್ಚೆ ನಡೆಯಲಿದೆ ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!