ಉಡುಪಿ: ಪ್ರಥಮ ಯಕ್ಷಗಾನ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ ಫೆ.2 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಫೆ.11 ಮತ್ತು 12 ರಂದು ಉಡುಪಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಿನ್ನೆ ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಯಕ್ಷಗಾನ ಸಮ್ಮೇಳನದ ಅಧಿಕೃತ ಆಹ್ವಾನ ಪತ್ರಿಕೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಬಿಡುಗಡೆಗೊಳಿಸಿದರು.
ಈ ಸಮಾರಂಭದಲ್ಲಿ ಕಾಳಹಸ್ತೇಂದ್ರ ಮಹಾಸ್ವಾಮೀಜಿ, ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್, ಸಮ್ಮೇಳನದ ಕಾರ್ಯಾಧ್ಯಕ್ಷ ಡಾ. ಜಿ.ಎಲ್.ಹೆಗಡೆ, ಕಾಪು ಶಾಸಕ ಲಾಲಾಜಿ ಮೆಂಡನ್, ದಿ. ಮೈಸೂರು ಎಲೆಕ್ನಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಎಸ್.ಹೆಚ್. ಶಿವರುದ್ರಪ್ಪ, ಮಟ್ಟಾರು ರತ್ನಾಕರ ಹೆಗ್ಡೆ, ಸಮ್ಮೇಳನದ ಪ್ರಧಾನ ಸಂಚಾಲಕ ಪಿ. ಕಿಶನ್ ಹೆಗ್ಡೆ, ಸಂಚಾಲಕ ಮುರಳಿ ಕಡೆಕಾರ್, ಗೀತಾನಂದ ಫೌಂಡೇಶನ್ ಕೋಟ ಇದರ ಪ್ರವರ್ತಕ ಆನಂದ್ ಸಿ. ಕುಂದರ್, ಶ್ರೀ ಮಹಾಲಕ್ಷ್ಮಿ ಕೋ. ಬ್ಯಾಂಕ್ ನ ಅಧ್ಯಕ್ಷ ಯಶ್ ಪಾಲ್ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.