ಮಂಗಳೂರು: ಜ್ಯುವೆಲ್ಲರಿ ಅಂಗಡಿಯಲ್ಲಿ ಸಿಬ್ಬಂದಿಗೆ ಚೂರಿ ಇರಿತ

ಮಂಗಳೂರು ಫೆ.3 : ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಚೂರಿ ಇರಿದು ದುಷ್ಕರ್ಮಿ ಪರಾರಿಯಾಗಿರುವ ಘಟನೆ ಇಂದು ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ನಡೆದಿದೆ.

ಚೂರಿ ಇರಿತದಿಂದ ಗಾಯಗೊಂಡಿರುವ ಸಿಬಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಂಗಡಿಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಅಂಗಡಿ ಮಾಲಕರು ಊಟ ಮಾಡಿ ವಾಪಸ್ ಅಂಗಡಿಗೆ ಬಂದಾಗ ಘಟನೆ ಗಮನಕ್ಕೆ ಬಂದಿದೆ. ದರೋಡೆಯೆ ಅಥವಾ ಬೇರೆ ಕಾರಣವೇ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!