ಸುರತ್ಕಲ್‌: ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ

ಸುರತ್ಕಲ್‌ ಫೆ.3 :ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 ತಡಂಬೈಲ್‌ ಗ್ರಾಮದ ಜಯಶ್ರೀ ಶೆಟ್ಟಿ ಎಂಬವರ ಮಗಳು ಕಾವೇರಿ(19) ಕಾಣೆಯಾದ ಯುವತಿ.

ಜ.27ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು ಮರಳಿ ಬಾರದೇ ಕಾಣೆಯಾಗಿದ್ದಾರೆ. ಕಾವೇರಿ ತಡಂಬೈಲ್‌ ನಿವಾಸಿ ಮಾಂತೇಶ ಎಂಬಾತನನ್ನು ಪ್ರೀತಿಸುತ್ತಿದ್ದು, ಆತನೊಂದಿಗೆ ತೆರಳಿರುವ ಸಾಧ್ಯತೆ ಇದೆ ಎಂದು ಕಾವೇರಿ ತಾಯಿ ನೀಡಿದ ದೂರಿನಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!