ಮೂಡುಬಿದ್ರೆ: ಬುದ್ದಿಮಾತು ಹೇಳಿದ್ದಕ್ಕೆ ವ್ಯಕ್ತಿ ಮೇಲೆ ಟಿಪ್ಪರ್ ಹರಿಸಿ ಹಲ್ಲೆ- ಗಾಯಾಳು ಮೃತ್ಯು

ಮೂಡುಬಿದಿರೆ ಫೆ.3 : ‘ನಿಧಾನವಾಗಿ ವಾಹನ ಚಲಾಯಿಸು’ ಎಂದು ಬುದ್ಧಿಮಾತು ಹೇಳಿದ ವ್ಯಕ್ತಿಗೆ ಕೋಪಗೊಂಡ ಟಿಪ್ಪರ್ ಚಾಲಕ ಹಲ್ಲೆ ಮಾಡಿದ್ದು ಮಾತ್ರವಲ್ಲದೆ ಆತನ ಮೇಲೆ ಟಿಪ್ಪರ್ ಚಲಾಯಿಸಿದ ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ ಮೃತಪಟ್ಟ ಘಟನೆ ಮೂಡಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ವ್ಯಕ್ತಿ ಹಾಗೂ ಟಿಪ್ಪರ್ ಚಾಲಕ ಇಬ್ಬರೂ ಕೋಟೆಬಾಗಿಲು ನಿವಾಸಿಗಳಾಗಿದ್ದಾರೆ.  ಇಂದು ಮಧ್ಯಾಹ್ನ ಸ್ಥಳೀಯ ಮಸೀದಿಗೆ ಹೋಗಿದ್ದರು. ಆರೋಪಿ ನಮಾಜ್ ಮುಗಿಸಿ ಟಿಪ್ಪರ್‌ನಲ್ಲಿ ಹೊರಡುವಾಗ ಹತ್ತಿರದಲ್ಲಿ ಬರುತ್ತಿದ್ದ ವ್ಯಕ್ತಿ ಟಿಪ್ಪರ್ ಅನ್ನು ನಿಧಾನವಾಗಿ ಚಲಾಯಿಸಿಕೊಂಡು ಹೋಗುವಂತೆ ಸಲಹೆ ನೀಡಿದ್ದಾರೆ. ಇದರಿಂದ ಕೋಪಗೊಂಡ ಚಾಲಕ ಮಾತಿಗಿಳಿದಿದ್ದಾನೆ. ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಚಾಲಕ ಹಲ್ಲೆ ನಡೆಸಿದ್ದಾನೆ. ಮಾತ್ರವಲ್ಲದೆ ನೆಲಕ್ಕೆ ಬಿದ್ದ ವ್ಯಕ್ತಿಯ ಮೇಲೆ ಟಿಪ್ಪರ್ ಚಲಾಯಿಸಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ‌. ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!