ಡಾ. ಜಿ. ಪರಮೇಶ್ವರ್ ಅವರಿಗೆ ಯಾವುದೇ ಮುನಿಸಿಲ್ಲ- ಬಿ.ಕೆ. ಹರಿಪ್ರಸಾದ್

ಉಡುಪಿ ಫೆ.3 (ಉಡುಪಿ ಟೈಮ್ಸ್ ವರದಿ) : ಡಾ. ಜಿ. ಪರಮೇಶ್ವರ್ ಅವರಿಗೆ ಯಾವುದೇ ಮುನಿಸಿಲ್ಲ. ಅದು ಕೇವಲ ಮಾಧ್ಯಮದ ಸೃಷ್ಟಿ ಅಷ್ಟೇ. ಪಕ್ಷದಲ್ಲಿ ಯಾರ ಮೇಲೂ ಯಾರಿಗೂ ಭಿನ್ನಾಭಿಪ್ರಾಯಗಳಿಲ್ಲ. ಹಾಗಾಗಿ ಸಮಾಧಾನದ ಅಗತ್ಯವಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಹೇಳಿದರು.

ಉಡುಪಿಯಲ್ಲಿಂದು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪರಮೇಶ್ವರ್ ಅವರು ಯಾರ ಮೇಲೂ ಸಿಟ್ಟು ಮಾಡಿಕೊಂಡಿಲ್ಲ. ನಾವು ಜೊತೆಯಾಗಿ ಊಟ ಕಾಫಿಗೆ ಹೋಗುತ್ತಿರುತ್ತೇವೆ, ಸಿಟ್ಟು ಮಾಡಿಕೊಂಡಿದ್ದರೆ ನಾವು ಹೋಗುತ್ತಿದ್ದೇವಾ ಎಂದು ಪ್ರಶ್ನಿಸಿದರು. ಹಾಗೂ ಪರಮೇಶ್ವರ್ ಚುನಾವಣಾ ಪ್ರಣಾಳಿಕೆಯ ಸಮಿತಿಯ ಅಧ್ಯಕ್ಷರು. ಚುನಾವಣಾ ಪ್ರಣಾಳಿಕೆಯ ವಿಚಾರವಾಗಿ ಅವರೊಂದಿಗೆ ಕೆಲವೊಂದು ಚರ್ಚೆ ಮಾಡಬೇಕಾಗಿತ್ತು. ಅದಕ್ಕೆ ಡಿಕೆಶಿ ಅವರು ಹೋಗಿದ್ದರು. ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ಕೊಡುತ್ತಾರೆಂಬುವುದೆಲ್ಲ ಮಾಧ್ಯಮದ ಸೃಷ್ಟಿ ಎಂದರು.

ಇದೇ ವೇಳೆ ಕುದುರೆ ವ್ಯಾಪಾರದ ಕುರಿತು ಮಾತನಾಡಿದ ಅವರು, ಅದು ಅತಂತ್ರ ಸರಕಾರ ಇದ್ದಾಗ ಮಾತ್ರ ಕುದುರೆ ವ್ಯಾಪರಕ್ಕೆ ಅವಕಾಶ. ಯಾವುದೇ ಕಾರಣಕ್ಕೂ ಅತಂತ್ರ ಸರಕಾರ ಬರುವುದಿಲ್ಲ. ಜನರಿಗೆ ನೋವಾಗಿದೆ, ಸ್ಪಷ್ಟವಾದ ಬಹುಮತ ಬರಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!