ಮಡಿಕೇರಿಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರದೀಪ್ ಆರ್. ಭಂಡಾರಿಗೆ ಪಿಎಚ್ ಡಿ ಪದವಿ
ಕೊಣಾಜೆ ಫೆ.9 : ಮಂಗಳೂರು ವಿವಿಯ ಘಟಕ ಕಾಲೇಜಾದ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರದೀಪ್ ಆರ್. ಭಂಡಾರಿ ಅವರಿಗೆ ಮಂಗಳೂರು ವಿವಿ ಪಿ.ಎಚ್.ಡಿ. ಪದವಿ ನೀಡಿ ಗೌರವಿಸಿದೆ.
ಪ್ರದೀಪ್ ಆರ್. ಭಂಡಾರಿ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿಗಳಾದ ಪ್ರೊ. ಪಿ.ಎಸ್. ಯಡಪಡಿತ್ತಾಯ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ `ಪಾಲಿಸಿಸ್ ಆಂಡ್ ಪ್ರಾಕ್ಟಿಸಸ್ ಆಫ್ ಎಂಪ್ಲೋಯೀ ರೇಟೆನ್ಷನ್ ಮ್ಯಾನೇಜ್ಮೆಂಟ್ ಇನ್ ಟೆಲಿಕಾಂ ಸೆಕ್ಟರ್’ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿವಿ ಪಿ.ಎಚ್.ಡಿ. ಪದವಿ ನೀಡಿ ಗೌರವಿಸಿದೆ.
ಇವರು ಉಡುಪಿ ಜಿಲ್ಲೆ ಕಾಪು ತಾಲೂಕು ಮಲ್ಲಾರು ಗ್ರಾಮದವರಾಗಿದ್ದು, ಮಜೂರು ಗ್ರಾಮದ ದಿ. ರವೀಂದ್ರ ಭಂಡಾರಿ ಹಾಗೂ ದಿ. ಸುಜಯ ಭಂಡಾರಿಯವರ ಪುತ್ರರಾಗಿದ್ದಾರೆ. ಇವರು ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಮಂಗಳೂರು ವಿಶ್ವವಿದ್ಯಾನಿಲಯದ 41 ನೇ ಘಟಿಕೋತ್ಸವದಲ್ಲಿ ಪಿ.ಎಚ್.ಡಿ ಪ್ರಮಾಣ ಪತ್ರವನ್ನು ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.