ಅಜೆಕಾರು: ಅನಾರೋಗ್ಯದ ಕಾರಣ- ವ್ಯಕ್ತಿ ಆತ್ಮಹತ್ಯೆ
ಅಜೆಕಾರು ಫೆ.9 (ಉಡುಪಿ ಟೈಮ್ಸ್ ವರದಿ) : ಅನಾರೋಗ್ಯದ ಕಾರಣದಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಜೆಕಾರು ಠಾಣಾ ವ್ಯಾಪ್ತಿಯ ಮರ್ಣೆ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಸ್ಥಳೀಯ ನಿವಾಸಿ ರಾಜು ಮೇರ (53) ಆತ್ಮಹತ್ಯೆ ಮಾಡಿಕೊಂಡವರು. ಇವರು ಸುಮಾರು ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಫೆ.8 ರಂದು ರಾತ್ರಿ ವಿಪರೀತ ತಲೆ ನೋವು ಎಂದು ಪತ್ನಿ ವಸಂತಿ ಅವರ ಬಳಿ ಹೇಳಿಕೊಂಡಿದ್ದರು. ಇಂದು ಬೆಳಿಗ್ಗೆ 7:30 ರ ಸುಮಾರಿಗೆ ವಸಂತಿ ಅವರು ಎದ್ದು ನೋಡುವಾಗ ಗಂಡ ರಾಜು ಮೇರ ರವರು ಕಾಣದೆ ಇದ್ದೂದರಿಂದ ಅವರನ್ನು ಹುಡುಕಿದಾಗ ಮನೆಯ ಎದುರಿನ ಹಾಡಿಯಲ್ಲಿ ರಾಜು ಮೇರ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ವಸಂತಿ ಅವರು ನೀಡಿದ ಮಾಹಿತಿಯಂತೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.