ಕಾಪು: ಫೆ.12 ರಂದು ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಬ್ರಹ್ಮಕಲಶೋತ್ಸವ, ನೇಮೋತ್ಸವದ ಪೂರ್ವಭಾವಿ ಸಭೆ
ಕಾಪು ಫೆ.11 (ಉಡುಪಿ ಟೈಮ್ಸ್ ವರದಿ) : ಫೆ.21 ರಿಂದ 25 ರ ವರೆಗೆ ನಡೆಯಲಿರುವ ಕಾಪುವಿನ ಪಣಿಯೂರಿನ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವದ ಪ್ರಯುಕ್ತ ನಡೆಯುವ ವಿವಿಧ ಕಾರ್ಯಕ್ರಮಗಳ ತಯಾರಿಗಾಗಿ ಪೂರ್ವಭಾವಿ ಸಭೆಯು ಫೆ.12 ರಂದು ನಡೆಯಲಿದೆ.
ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದ್ದು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಬೆಳಪು ಡಾ| ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಫೆ.12 ರಂದು ಸಂಜೆ 4 ಗಂಟೆಗೆ ನಡೆಯುವ ಸಭೆಯಲ್ಲಿ ಫೆ.21 ರಿಂದ 25 ರ ವರೆಗೆ ನಡೆಯಲಿರುವ ಕಾಪುವಿನ ಪಣಿಯೂರಿನ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವದ ಪ್ರಯುಕ್ತ ನಡೆಯಲಿರುವ ವೈದಿಕ ಕಾರ್ಯಕ್ರಮಗಳು, ಸಭಾ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ತಯಾರಿ ಕುರಿತು ಚರ್ಚೆ ನಡೆಸಲಾಗುವುದು.
ಈ ಸಭೆಯಲ್ಲಿ ಗುತ್ತಿನಾರ್ ಯೋಗೀಶ್ ಶೆಟ್ಟೆ ಪಣಿಯೂರು ಗುತ್ತು, ಮುಂಬಯಿ ಸಮಿತಿ ಅಧ್ಯಕ್ಷ ಸುಕುಮಾರ್ ಶೆಟ್ಟಿ, ಸ್ಥಳ ವಂದಿಗರು ಮತ್ತು ಊರ ಹತ್ತು ಸಮಸ್ತರು, ಬಿ. ಶಂಕರ್, ಬಿ.ಗುರಿಕಾರರು ಮತ್ತು ಸರ್ವ ಸಮಿತಿಯ ಸದಸ್ಯರು ಹಾಗೂ ಸ್ವಾಗತ, ಮೆರವಣಿಗೆ, ಪ್ರಚಾರ, ಉಗ್ರಾಣ, ಸಭಾ ಕಾರ್ಯಕ್ರಮ, ಅನ್ನಸಂತರ್ಪಣೆ, ಪಾರ್ಕಿಂಗ್, ಸೆಕ್ಯೂರಿಟಿ ಮತ್ತು ಶುಚಿತ್ವ ಈ ಎಲ್ಲಾ ಸಮಿತಿಗಳ ಅಧ್ಯಕ್ಷರುಗಳು ಹಾಗೂ ಸರ್ವ ಸದಸ್ಯರುಗಳು ಮತ್ತು ಊರ ಸಮಸ್ತರು ಭಾಗವಹಿಸಲಿದ್ದಾರೆ.