“ಸಮಗ್ರ ಯಕ್ಷಗಾನ ಸಮ್ಮೇಳನ”ದ ಭವ್ಯ ಮೆರವಣಿಗೆ
ಉಡುಪು ಫೆ.11 (ಉಡುಪಿ ಟೈಮ್ಸ್ ವರದಿ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು, ಜಿಲ್ಲಾಡಳಿತ, ಉಡುಪಿ ಜಿಲ್ಲೆ ವತಿಯಿಂದ ಇಂದು ಮತ್ತು ನಾಳೆ ನಡೆಯಲಿರುವ ರಾಜ್ಯ ಮಟ್ಟದ “ಸಮಗ್ರ ಯಕ್ಷಗಾನ ಸಮ್ಮೇಳನ – 2023” ದ ಅಂಗವಾಗಿ ಇಂದು ಬೆಳಿಗ್ಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಎಂ.ಜಿ.ಎಂ ಮೈದಾನದ ವರೆಗೆ ಯಕ್ಷಗಾನ ಸಮ್ಮೇಳನ ಅಧ್ಯಕ್ಷರಾದ ಡಾ. ಎಂ. ಪ್ರಭಾಕರ ಜೋಶಿ ಅವರ ಭವ್ಯ ಮೆರವಣಿಗೆ ನಡೆಯಿತು.
ಈ ಭವ್ಯ ಮೆರವಣಿಗೆಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬಳಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ ಶಂಕರ್ ಅವರೊಂದಿಗೆ ಸಮಗ್ರ ಯಕ್ಷಗಾನ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಶಾಸಕ ಕೆ. ರಘುಪತಿ ಭಟ್ ರವರು ಚಾಲನೆ ನೀಡಿದರು
ಈ ಮೆರವಣಿಗೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಯಕ್ಷಗಾನ ಕ್ಷೇತ್ರದ ಹಿರಿಯ ವಿಧ್ವಂಸ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಎಂ. ಪ್ರಭಾಕರ ಜೋಷಿ ಅವರ ಸಹಿತ ಜಿಲ್ಲಾಧಿಕಾರಿ ಕೂರ್ಮಾ ರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಸಂಚಾಲಕ ಮುರಳಿ ಕಡೆಕಾರ್ ಅವರು ಸಾಗಿದರು. ಹಾಗೂ ಮೆರವಣಿಗೆಯಲ್ಲಿ ಡೋಲು, ವಿವಿಧ ವೇಷಗಳು, ಮಹಿಳೆಯರ ಹಾಗೂ ಇತರ ತಂಡದ ಚೆಂಡೆ ನಾದ ಸಹಿತ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದರು.