ಜೆಡಿಎಸ್ ರಾಜ್ಯ ಕಾರ್ಯದರ್ಶಿಯಾಗಿ ಗಂಗಾಧರ ಬಿರ್ತಿ ನೇಮಕ

ಉಡುಪಿ ಫೆ.16: (ಉಡುಪಿ ಟೈಮ್ಸ್ ವರದಿ): ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಗಂಗಾಧರ ಬಿರ್ತಿ ಅವರನ್ನು ನೇಮಕ ಮಾಡಲಾಗಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರು ಈ ನೇಮಕ ಆದೇಶ ಹೊರಡಿಸಿದ್ದಾರೆ. ಹಾಗೂ ಈ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ದರಾಗಿ, ರಾಜ್ಯದಲ್ಲಿ ಜನತಾದಳ ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾಯೋನ್ಮುಖರಾಗುವಂತೆ ತಿಳಿಸಿ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!