ಕೊನೆಗೂ ಘೋಷಣೆ ಆಯಿತು ನಾರಾಯಣಗುರು ಅಭಿವೃದ್ಧಿ ನಿಗಮ

ಬೆಂಗಳೂರು ಫೆ.20(ಉಡುಪಿ ಟೈಮ್ಸ್ ವರದಿ): ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ಹಿಂದುಳಿದ ಜಾತಿಗಳ ಪೈಕಿ‌ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಸಮುದಾಯದ ಬಹುಕಾಲದ ಬೇಡಿಕೆಯಾಗಿತ್ತು. ಸಮುದಾಯದ ಈ ಬೇಡಿಕೆ ಈಡೇರಿಕೆಗಾಗಿ ಕೆಲ ದಿನಗಳ ಹಿಂದಷ್ಟೇ  ಸಚಿವ ವಿ.ಸುನಿಲ್ ಕುಮಾರ್ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಸ್ವಾಮೀಜಿಗಳು ಮತ್ತು  ಸಮುದಾಯದ ಮುಖಂಡರ ಜತೆ ಭೇಟಿಯಾಗಿ ನಿಗಮ ಸ್ಥಾಪನೆಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಬೊಮ್ಮಾಯಿ ನೀಡಿದ ಭರವಸೆ ಈಗ ಕಾರ್ಯ ರೂಪಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.

ಹಾಗೂ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ಪಂದಿಸುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ ಎಂದೂ ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!