ಪುತ್ತೂರು: ಫೈನಾನ್ಸ್ ನಿಂದ ಸಾಲ ಪಡೆದು ತೀರಿಸದೆ ವಂಚನೆ- ಆರೋಪಿ ಬಂಧನ

ಪುತ್ತೂರು ಫೆ.21: ಫೈನಾನ್ಸ್ ವೊಂದರಿಂದ ಮಾಡಿದ್ದ ಸಾಲ ತೀರಿಸದೆ ತಲೆ ಮರೆಸಿಕೊಂಡಿದ್ದ ಮಂಗಳೂರಿನ ಕುದ್ರೋಳಿಯ ವ್ಯಕ್ತಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಮೂಲತಹ ಮಂಗಳೂರು ಕುದ್ರೋಳಿ ನಿವಾಸಿಯಾಗಿದ್ದ ಬಂಟ್ವಾಳದ ಗಂಜಿಮಠ ಗ್ರಾಮದ ಪೊಳಲಿ ಗುರಿಕಂಬಳ ರೋಡ್ ನಿವಾಸಿ ಯಾಸೀನ್ ಅಹಮ್ಮದ್ ಬಂಧಿತ ಆರೋಪಿ. ಪುತ್ತೂರು ಪೊಲೀಸರು ಆರೋಪಿಯನ್ನು ಫೆ.20ರಂದು ಎ.ಎಸ್.ಐ ಚಂದ್ರ ಮತ್ತು ಹೆಡ್‌ ಕಾನ್‌ಸ್ಟೇಬಲ್ ಪರಮೇಶ್ವರ ಅವರು ಪೊಳಲಿಯಲ್ಲಿ ಬಂಧಿಸಿದ್ದಾರೆ.

ಈತ 2014ರಲ್ಲಿ ಬಂಟ್ವಾಳದ ಶ್ರೀರಾಮ ಫೈನಾನ್ಸ್ ನಿಂದ ಸಾಲ ಪಡೆದಿದ್ದ. ಸಾಲಕ್ಕೆ ನೀಡಿದ ಚೆಕ್‌ ಬೌನ್ಸ್ ಕೇಸು ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸುಮಾರು 7 ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ಯಾಸೀನ್ ಅಹಮ್ಮದ್‌ ತಲೆ ಮರೆಸಿಕೊಂಡಿದ್ದ. ಹೀಗಾಗಿ ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು.

Leave a Reply

Your email address will not be published. Required fields are marked *

error: Content is protected !!