ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಮುಖ್ಯಮಂತ್ರಿ ಯವರಿಂದ ಸ್ಥಳ ಪರಿಶೀಲನೆ

ಬೆಂಗಳೂರು:  ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಸ್ಥಳ ಪರಿಶೀಲನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು (ಜ.30) ನಡೆಸಿದರು. ಈ ವೇಳೆ, ರೇಸ್ ಕೋರ್ಸ್ ರಸ್ತೆ, ರಾಜಾರಾಮ್ ಮೋಹನ್ ರಾಯ್ ರಸ್ತೆ, ಹೇಯ್ನ್ಸ್ ರಸ್ತೆ, ಹುಡ್ ಸ್ಟ್ರೀಟ್, ಟಾಟಾ ಲೇನ್, ಕ್ಯಾಪಿಟಲ್ ಹೋಟೆಲ್-ರಾಜಭವನ ಜಂಕ್ಷನ್ ಮತ್ತು ಪ್ಲಾನೆಟೇರಿಯಂ ರಸ್ತೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಈ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನಲ್ಲಿ 37 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದ್ದು, ಈ ವರೆಗೆ 4 ಕಾಮಗಾರಿಗಳು ಪೂರ್ಣಗೊಂಡಿವೆ. 29 ಕಾಮಗಾರಿಗಳು ಪ್ರಗತಿಯಲ್ಲಿದ್ದು ಇನ್ನೂ 4 ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. 


 ಇನ್ನು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರಸ್ತೆ ಅಭಿವೃದ್ಧಿ, ಕೋವಿಡ್ ಆಸ್ಪತ್ರೆಗಳಿಗೆ ನೆರವು, ಐಟಿ-ಯೋಜನೆಗಳು, ಕಟ್ಟಡ ನಿರ್ಮಾಣ ಮತ್ತು ಇತರ ಕಾಮಗಾರಿಗಳು ಸೇರಿವೆ. ಈ ಸ್ಮಾರ್ಟ್ ಸಿಟಿ ಯೋಜನೆಯ ಅಂದಾಜು ವೆಚ್ಚ 930 ಕೋಟಿ ರೂ.ಗಳಾಗಿದ್ದು,ಈ ವರೆಗೆ ಈ ಕಾಮಗಾರಿಗೆ 103 ಕೋಟಿ ರೂ. ವೆಚ್ಚವಾಗಿದೆ.  ಈ ಕಾಮಗಾರಿಗಳಲ್ಲಿ ಗುಣಮಟ್ಟತೆಯನ್ನು ಕಾಯ್ದುಕೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!