ಮಹಿಳಾಧಿಕಾರಿಗಳ ಕಿತ್ತಾಟ-ಡಿ. ರೂಪ ಪರ ಬ್ಯಾಟಿಂಗ್ ಮಾಡಿದ ಸಂಸದ ಪ್ರತಾಪ ಸಿಂಹ

ಬೆಂಗಳೂರು ಫೆ.21 : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿ ಇದೀಗ `ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಎತ್ತಿರುವ ಎಲ್ಲಾ ಪ್ರಶ್ನೆಗಳು ನೈತಿಕ, ಕಾನೂನಾತ್ಮಕವಾಗಿವೆ’ ಎಂದು ಸಂಸದ ಪ್ರತಾಪ ಸಿಂಹ ಅವರು ಹೇಳಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸತ್ಯ ಶೋಧನಾ ಸಮಿತಿಯೊಂದನ್ನು ರಚಿಸುವ ಮೂಲಕ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು’. ಡಿ.ಕೆ.ರವಿ ಸಾವು, ಚಾಮರಾಜನಗರ ಆಕ್ಸಿಜನ್ ದುರಂತ, ಹಿರಿಯ ಅಧಿಕಾರಿಗಳ ಮೇಲಿನ ಕಿರುಕುಳ ಸೇರಿದಂತೆ ಅನೇಕ ಅಂಶಗಳ ಮೇಲೆ ರೂಪಾ ಅವರು ಬೆಳಕು ಚೆಲ್ಲಿದ್ದಾರೆ. ಹಾಗಾಗಿ ಸಿಂಧೂರಿ ಅವರು ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗಿನಿಂದ ಇಲ್ಲಿಯವರೆಗೆ ಅವರ ಆಡಳಿತಾವಧಿಯಲ್ಲಿ ಕೇಳಿಬಂದಿರುವ ಎಲ್ಲಾ ಆರೋಪಗಳ ಕುರಿತು ಸರ್ಕಾರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!