ಮಂಗಳೂರು: ಆಟೋ ಚಾಲಕನ ನಿರ್ಲಕ್ಷ್ಯ- ಪ್ರಾಣ ಕಳೆದುಕೊಂಡ ಬೈಕ್ ಸವಾರ

ಮಂಗಳೂರು, ಫೆ.21 : ಆಟೋ ಚಾಲಕ ನಿರ್ಲಕ್ಷ್ಯದಿಂದ ರಸ್ತೆ ಮದ್ಯದಲ್ಲಿ ಯು ಟರ್ನ್ ತೆಗೆದುಕೊಂಡ ಪರಿಣಾಮ ಬೈಕ್ ಸವಾರನೋರ್ವ ರಿಕ್ಷಾಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ಬಿಜೈನಲ್ಲಿ ಇಂದು ಮಧ್ಯಾಹ್ನ ನಡೆದಿದೆ.

 ನಗರದ ಎಸ್.ಡಿ. ಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಬಿಜೈ ನಿವಾಸಿ ಕವನ್ ಆಳ್ವ(20) ಮೃತ ಯುವಕ.

ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಆಟೋ ಚಾಲಕ ನಿರ್ಲಕ್ಷ್ಯದಿಂದ ರಸ್ತೆ ಮಧ್ಯದಿಂದಲೇ ಯು ಟರ್ನ್ ತೆಗೆದುಕೊಂಡಿದ್ದ.  ಈ ವೇಳೆ ಮುಂದಿನಿಂದ ಬರುತ್ತಿದ್ದ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡು ರಿಕ್ಷಾಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ಮರಕ್ಕೆ ಹೋಗಿ ಬಡಿದಿದ್ದಾನೆ. ಹೆಲ್ಮೆಟ್ ಇಲ್ಲದೇ ಯುವಕನ ತಲೆಯ ಭಾಗ ನೇರವಾಗಿ ಮರಕ್ಕೆ ಬಡಿದಿದ್ದರಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಕದ್ರಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!