ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಸಾಮಾನ್ಯ ಮಹಾಸಭೆ

ಉಡುಪಿ ಫೆ.21(ಉಡುಪಿ ಟೈಮ್ಸ್ ವರದಿ): ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಸಾಮಾನ್ಯ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಅಮ್ಮಣಿಯವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಶಿರ್ವದ ಪೆರ್ನಾಲುವಿನ ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ನಡೆಯಿತು.

ಸಭೆಯಲ್ಲಿ ಚುನಾವಣಾಧಿಕಾರಿಗಳಾಗಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾಲಯದ ಸಮಾಜ ಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೇಸರ್ ಡಾ. ಸಬಿತಾ ಗುಂಡ್ಮಿ ಅವರು ಪದಾಧಿಕಾರಿಗಳ ಆಯ್ಕೆಯನ್ನು ನಡೆಸಿಕೊಟ್ಟರು. ಮುಂದಿನ ವರ್ಷಕ್ಕೆ ಅಧ್ಯಕ್ಷೆಯಾಗಿ ಸುಶೀಲಾ ಕೊರಗ ನಾಡ ಇವರು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ವೇಳೆ ಒಕ್ಕೂಟದ ಕಾರ್ಯದರ್ಶಿ ಕೆ.ಪುತ್ರನ್ ಅವರು ವರದಿ ಮಂಡಿಸಿದರು, ಬಳಿಕ ಸಮುದಾಯದವರೊಂದಿಗೆ ಸಂವಾದ ನಡೆಯಿತು. ಇದೇ ವೇಳೆ ಸಭೆಯಲ್ಲಿ ಇತ್ತೀಚೆಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಗೌರವ ಪಡೆದ ಡಾ.ದಿನಕರ್ ಕೊರಗ ಕೆಂಜೂರು ಇವರನ್ನು ಒಕ್ಕೂಟದ ವತಿಯಿಂದ ಅಭಿನಂದಿಸಲಾಯಿತು.

Leave a Reply

Your email address will not be published. Required fields are marked *

error: Content is protected !!