ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ

ಬಂಟ್ವಾಳ : ವಿಟ್ಲ ಸಮೀಪದ ಕೇಪು ಗ್ರಾಮದ ಕರವೀರ ಅಂಗನವಾಡಿ ಬಳಿ ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟು ಪ್ರಯಾಣಿಕ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು (ಜ.30) ಮಧ್ಯಾಹ್ನ ನಡೆದಿದೆ. 

ಬಂಟ್ವಾಳ ತಾಲೂಕು ಕೇಪು ಗ್ರಾಮದ ಮೈರಕವೀರ ನಿವಾಸಿ ಪುಷ್ಪಾವತಿ ಗಂಭೀರ ಗಾಯಗೊಂಡ ಮಹಿಳೆ. ಇವರು ಮನೆಗೆ ತೆರಳಲು ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಂಗನವಾಡಿ ಬಳಿಯ ತಿರುವಿನಲ್ಲಿ ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದಾರೆನ್ನಲಾಗಿದೆ. ಚಲಿಸುತ್ತಿದ್ದ ಬಸ್‌ನಿಂದ ಬಿದ್ದ ಕಾರಣ ಪುಷ್ಪಾವತಿ ಅವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!