ಶಿವಪಾಡಿ ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರ ಮಹಾಯಾಗ ಶುಭಾರಂಭ
ಮಣಿಪಾಲ ಫೆ.22(ಉಡುಪಿ ಟೈಮ್ಸ್ ವರದಿ): ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಇಂದು ಋತ್ವಿಜರಿಂದ ಪೂಜೆಯೊಂದಿಗೆ ಅತಿರುದ್ರ ಮಹಾಯಾಗ ಶುಭಾರಂಭಗೊಂಡಿತು.
ಇಂದಿನಿಂದ ಮಾ.5 ರ ವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗದ ಧಾರ್ಮಿಕ ಕಾರ್ಯಕ್ರಮದ ಮೊದಲ ದಿನವಾದ ಇಂದು ಬೆಳಿಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ ಪ್ರಾರಂಭಗೊಂಡಿತು.
ಈ ಶುಭ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ರಘುಪತಿ ಭಟ್, ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಮಹೇಶ್ ಠಾಕೂರ್, ಬೆಂಗಳೂರಿನ ಮಾಜಿ ವಿಧಾನಸಭಾ ಸದಸ್ಯರಾದ ದಯಾನಂದ ರೆಡ್ಡಿ, ಡಾ. ಜಿ. ಶಂಕರ್, ನಟ ರಕ್ಷಿತ್ ಶೆಟ್ಟಿ ಮತ್ತು ಕುಂದಾಪುರ ಗುತ್ತಿಗೆದಾರರಾದ ಕಾರ್ತಿಕ್ ಆರ್. ನಾಯಕ್ ಉಪಸ್ಥಿತರಿದ್ದರು.