ಹೈಕೋರ್ಟ್‌ ಸರ್ಕಾರಿ ವಕೀಲ ವಿ. ಶ್ರೀನಿಧಿ ಹೃದಯಾಘಾತದಿಂದ ನಿಧನ

ಬೆಂಗಳೂರು ಫೆ.22 : ಹೈಕೋರ್ಟ್‌ನಲ್ಲಿ ಸರ್ಕಾರಿ ವಕೀಲರಾಗಿದ್ದ ವಿ.ಶ್ರೀನಿಧಿ ಅವರು ಹೃದಯಾಘಾತದಿಂದ ನಿನ್ನೆ ಮಧ್ಯಾಹ್ನ ನಿಧನರಾಗಿದ್ದಾರೆ. 

46 ವರ್ಷದ ವಿ.ಶ್ರೀನಿಧಿ ಅವರು ನಿನ್ನೆ ಮಧ್ಯಾಹ್ನ 2.25ಕ್ಕೆ ಮಲ್ಲೇಶ್ವರದ ಅಪೊಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರ ‘ಅಂತ್ಯ ಸಂಸ್ಕಾರದ ಬಗ್ಗೆ ಇನ್ನೂ ನಿರ್ಧರಿಸಿಲ್ಲ’ ಎಂದು ಸಮೀಪದ ಬಂಧುಗಳು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ ಮಾಹಿತಿ ನೀಡಿದ್ದಾರೆ. 

ಮೃತರು ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ತಾಳವಟ್ಟಿ ಗ್ರಾಮದ ಶ್ರೀನಿಧಿ ಅವರು ಕಳೆದ ಎಂಟು ವರ್ಷಗಳಿಂದ ಸರ್ಕಾರದ ಪರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪರ ವಕೀಲರಾಗಿ ಮಹತ್ವದ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿದ ವಕೀಲರೆನಿಸಿದ್ದರು.

Leave a Reply

Your email address will not be published. Required fields are marked *

error: Content is protected !!