ಪೆರ್ಡೂರು ಗ್ರಾ.ಪಂ. ಬಿಜೆಪಿ ಬೆಂಬಲಿತ ಮಾಜಿ ಸದಸ್ಯ ಚಂದ್ರಶೇಖರ್ ಶೆಟ್ಟಿ ಕಾಂಗ್ರೆಸ್ ಗೆ ಸೇರ್ಪಡೆ.
ಕಾಪು ಫೆ.22 (ಉಡುಪಿ ಟೈಮ್ಸ್ ವರದಿ): ಪೆರ್ಡೂರು ಗ್ರಾಮ ಪಂಚಾಯಿತಿನ ಮಾಜಿ ಬಿಜೆಪಿ ಬೆಂಬಲಿತ ಸದಸ್ಯ ಚಂದ್ರಶೇಖರ್ ಶೆಟ್ಟಿ ಅವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.
ಕಾಪುವಿನಲ್ಲಿ ರಾಜೀವ ಭವನದಲ್ಲಿ ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಕೇರಳ ಲೋಕಸಭಾ ಸದಸ್ಯರಾದ ಟಿ.ಎನ್ ಪ್ರತಾಪನ್ ಮತ್ತು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮತ್ತು ಇನ್ನಿತರ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಪೆರ್ಡೂರಿನ ಕಾಂಗ್ರೆಸ್ ಮುಖಂಡರಾದ ಶಾಂತರಾಮ್ ಸೂಡರವರ ಸೂಚನೆಯಂತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಚಂದ್ರಶೇಖರ್ ಶೆಟ್ಟಿ ಅವರು ಉದ್ಯಮಿಯಾಗಿದ್ದು ಪೆರ್ಡೂರಿನ ಪ್ರಭಾವಿ ಮುಖಂಡರಾಗಿದ್ದಾರೆ. ಇದೀಗ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಅವ್ಯವಸ್ಥಿತ ಆಡಳಿತಕ್ಕೆ ಬೇಸರಗೊಂಡು, ಕಾಂಗ್ರೆಸ್ ಪಕ್ಷದ ಅಭಿವೃದ್ಧಿ, ವಿನಯ್ ಕುಮಾರ್ ಸೊರಕೆ ಅಂತಹ ದೂರ ದೃಷ್ಟಿಯ ನಾಯಕನ ಕಾರ್ಯ ವೈಕರಿಗೆ ಮೆಚ್ಚಿ, ಇತ್ತೀಚಿನ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಗೆ ಮನಸೋತು ಕಾಂಗ್ರೆಸ್ ಸೇರ್ಪಡೆ ಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.