ಉಡುಪಿ: ಮಹಿಳೆ ಕುತ್ತಿಗೆಯಲ್ಲಿದ್ದ 2.50 ಲಕ್ಷದ ಮಾಂಗಲ್ಯ ಸರ ಸುಲಿಗೆ

ಉಡುಪಿ ಫೆ.22(ಉಡುಪಿ ಟೈಮ್ಸ್ ವರದಿ) : ನಗರದ ಬ್ರಹ್ಮಗಿರಿಯ ನಾಯರ್ ಕೆರೆ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 2.50 ಲಕ್ಷ ರೂ. ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಬೈಕ್ ನಲ್ಲಿ ಬಂದ ಇಬ್ಬರು ಸುಲಿಗೆ ಮಾಡಿಕೊಂಡು ಪರಾರಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಉಡುಪಿಯ ಬ್ರಹ್ಮಗಿರಿ ನಿವಾಸಿ ವಿಜಯ  ಜೆ.ಎಸ್‌ ಅವರು ಇಂದು ಬೇಳಿಗ್ಗೆ ನಾಯರ್‌ ಕೆರೆಯ ವಾಣಿಜ್ಯ ತೆರಿಗೆಗಳ ಭವನದ ಎದುರು ರಸ್ತೆಯಲ್ಲಿ ಬ್ರಹ್ಮಗಿರಿ ಕಡೆಗೆ ನಡೆದುಕೊಂಡು ಬರುತ್ತಿರುವಾಗ ಹಿಂದಿನಿಂದ ದ್ವಿಚಕ್ರ ವಾಹನ ದಲ್ಲಿ ಇಬ್ಬರು ಬೈಕ್ ಸವಾರರು  ವಿಜಯಾ ಅವರನ್ನು ತಳ್ಳಿ, ಅವರ ಕುತ್ತಿಗೆಯಲ್ಲಿದ್ದ ಅಂದಾಜು 2.50 ಲಕ್ಷ ಮೌಲ್ಯದ 50 ಗ್ರಾಂ ತೂಕದ ಚಿನ್ನದ ಮಾಂಗಲ್ಯದ ಸರವನ್ನು ಸುಲಿಗೆ ಮಾಡಿಕೊಂಡು ಹೋಗಿದ್ದಾರೆ ಎಂಬುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!