ಶಂಕರನಾರಾಯಣ: ಕುಸಿದು ಬಿದ್ದು ವ್ಯಕ್ತಿ ಮೃತ್ಯು
ಶಂಕರನಾರಾಯಣ ಫೆ.22(ಉಡುಪಿ ಟೈಮ್ಸ್ ವರದಿ) : ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಂಕರನಾರಾಯಣದಲ್ಲಿ ನಡೆದಿದೆ.
ಶಂಕರನಾರಾಯಣದ ಜನತಾ ಕಾಲೋನಿ ನಿವಾಸಿ ಶೀನ ಪೂಜಾರಿ ಮೃತಪಟ್ಟರು. ನಿನ್ನೆ ಅಂಪಾರು ಗ್ರಾಮದ ಬಾರ್ ವೊಂದರ ಒಳಗೆ ಕುಸಿದು ಬಿದ್ದಿದ್ದ ಇವರನ್ನು ಚಿಕಿತ್ಸೆಗಾಗಿ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಬಳಿಕ ಅಲ್ಲಿಂದ ಮತ್ತೆ ಕುಂದಾಪುರ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಶೀನ ಪೂಜಾರಿ ಅವರನ್ನು ಪರೀಕ್ಷಿಸಿದ ವೈಧ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಅದರಂತೆ ಶೀನ ಪೂಜಾರಿ ಅವರು ಅನಾರೋಗ್ಯದಿಂದ ಅಥವಾ ವಿಪರೀತ ಮದ್ಯಪಾನದ ಅಭ್ಯಾಸದಿಂದ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಮಗ ನೀಡಿದ ಮಾಹಿತಿಯಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.