ಪುತ್ತೂರು ಫೆ.23 : ನರಿಮೊಗರು ಗ್ರಾಮದ ಧರ್ಮನಗರದಲ್ಲಿ ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಸುರೇಶ್ (30) ಮೃತಪಟ್ಟವರು. ಮೃತ ಸುರೇಶ್ 2 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ.