ತುಮಕೂರು: ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಫೋಟ

ತುಮಕೂರು: ಶಿವಮೊಗ್ಗದಲ್ಲಿ ನಡೆದ ಭಾರೀ ಸ್ಫೋಟದ ದುರಂತ ಘಟನೆ ಜನರ ಮನದಲ್ಲಿ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಫೋಟಗೊಂಡ ಘಟನೆ ನಡೆದಿದೆ.
ತುಮಕೂರಿನ ಹೊನ್ನುಡುಕೆ ಸಮೀಪ ಮಸ್ಕಲ್ ಗ್ರಾಮದಲ್ಲಿ ಜಿಲೆಟಿನ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಸಂಪೂರ್ಣ ಧ್ವಂಸವಾಗಿರುವ ಘಟನೆ ವರದಿಯಾಗಿದೆ. ಲಕ್ಷ್ಮಿಕಾಂತ್ ಎನ್ನುವವರಿಗೆ ಸೇರಿದ ಮನೆಯಲ್ಲಿ ಘಟನೆ ನಡೆದಿದೆ. ಘಟನೆ ವೇಳೆ ಮನೆಯಲ್ಲಿದ್ದ ಲಕ್ಷ್ಮಿಕಾಂತ್ ಅವರ ಪತ್ನಿ ಸುವರ್ಣಮ್ಮ ಅವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಲಕ್ಷ್ಮಿಕಾಂತ್ ಅವರು, ಕೂಲಿ ಕೆಲಸ ಮಾಡಿಕೊಂಡಿದ್ದು, ಕಲ್ಲು ಬಂಡೆಗಳ ಸ್ಫೋಟ, ಮಣ್ಣು ಅಗೆತದಂತಹಾ ಕೆಲಸಕ್ಕೆ ನೆರವಾಗುತ್ತಿದ್ದರು. ಮಸ್ಕಲ್ ಗ್ರಾಮದ ಶಾಲೆಯ ಸಮೀಪ ಬಂಡೆಗಳ ಒಡೆಯಲು ಜಿಲೆಟಿನ್ ಕಡ್ಡಿಗಳನ್ನು ತರಿಸಿದ್ದು ಇದರಲ್ಲಿ ಉಳಿದವನ್ನು ಲಕ್ಷ್ಮಿಕಾಂತ್ ತಮ್ಮ ಮನೆಯಲ್ಲಿ ಇರಿಸಿಕೊಂಡಿದ್ದರೆಂದು ಹೇಳಲಾಗಿದೆ. ಸಧ್ಯ ಬಾಂಬ್ ನಿಷ್ಕ್ರಿಯ ದಳ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮುಂಜಾಗೃತಾ ಕ್ರಮವಾಗಿ ಮನೆಯ ಸುತ್ತಲಿನ 200 ಮೀ. ವ್ಯಾಪ್ತಿಯಲ್ಲಿ ಜನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!