ಪ್ರಧಾನಿ ಸಹೋದರರ ಹೆಸರರಲ್ಲಿ ವಂಚನೆ : ಆರೋಪಿ ಬಂಧನ

ಸುಲ್ತಾನಪುರ(ಉತ್ತರ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ಆರೋಪದಡಿ ಯುವಕನೊಬ್ಬನನ್ನು ಬಂಧಿಸಿರೋದಾಗಿ ಇಂದು (ಫೆ.2) ಪೊಲೀಸರು ತಿಳಿಸಿದ್ದಾರೆ.

‘ಜಿತೇಂದ್ರ ತಿವಾರಿ ಅಲಿಯಾಸ್ ಜೀತು ಬಂಧಿತ ಆರೋಪಿ. ಈತ ಪ್ರಧಾನಿಯ ಸಹೋದರನ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾನೆ ಎಂದು ಪ್ರಧಾನ ಮಂತ್ರಿ ಕಚೇರಿ ನೀಡಿದ ಮಾಹಿತಿಯ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಂದು ನಗರ ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ಭುಪೇಂದ್ರ ಸಿಂಗ್ ತಿಳಿಸಿದ್ದಾರೆ.

‘ಗುಜರಾತ್‌ನ ಮಾಧವ್‌ಪುರದಲ್ಲಿ ಜನವರಿ 4 ರಂದು ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಪ್ರಸ್ತಾಪಿಸಿದ ಕಾರ್ಯಕ್ರಮವೊಂದರ ಪೋಸ್ಟರ್ ಅನ್ನು ತಿವಾರಿ ತನ್ನ ಕಾರಿನಲ್ಲಿ ಅಂಟಿಸಿಕೊಂಡಿದ್ದನು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!