ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಕೆ. ಅಣ್ಣಾಮಲೈ ಭೇಟಿ; ಅದ್ಧೂರಿ ಸ್ವಾಗತ

ಉಡುಪಿ ಫೆ.27(ಉಡುಪಿ ಟೈಮ್ಸ್ ವರದಿ): ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಕರ್ನಾಟಕ ರಾಜ್ಯ ಚುನಾವಣಾ ಸಹ ಉಸ್ತುವಾರಿಯಾಗಿರುವ ಕೆ. ಅಣ್ಣಾಮಲೈ ಅವರು ಇಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. 

ಅಣ್ಣಾಮಲೈ ಅವರಿಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಹೂವಿನ ಹಾರಹಾಕಿ ಸ್ವಾಗತಿಸಿದರು.

ಈ ವೇಳೆ ಬಿಜೆಪಿ ಮಹಿಳಾ ಸದಸ್ಯರು ಆರತಿ ಬೆಳಗಿ, ಹಣೆಗೆ ಕುಂಕುಮ ಇಟ್ಟು ಅಣ್ಣಾಮಲೈ ಅವರನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ರಘುಪತಿ ಭಟ್, ಮುಖಂಡರಾದ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಪ್ರಮೋದ್ ಮಧ್ವರಾಜ್, ಕೆ. ಉದಯ ಕುಮಾರ್ ಶೆಟ್ಟಿ, ಸುಮಿತ್ರಾ ನಾಯಕ್, ನಯನ ಗಣೇಶ್ ಮೊದಲಾದವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!